2:03 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಚಳ್ಳಕೆರೆ ದೊಡ್ಡಉಳ್ಳಾರ್ತಿ ಜಾತ್ರೆ  ಸಮಾಪನ: ಗೌರಿದೇವಿ ವಿಸರ್ಜನೆ; ಮಕ್ಕಳಿಗಾಗಿ ಹೂ ತೊಟ್ಟಿಲ ಸೇವೆ

23/11/2021, 19:16

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿಯ ಶ್ರೀಗೌರಿದೇವಿ ಜಾತ್ರೆ ಸಡಗರ ಸಂಭ್ರಮದಿಂದ ನಡೆದಿದ್ದು, ಗೌರಿದೇವಿ ವಿಸರ್ಜನೆ ಕಾರ್ಯ ನೆರವೇರಿತು.

ಗೌರಿ ದೇವಿಯ ಮೂರ್ತಿಗೆ ದೀಪಾಲಂಕರದಿಂದ ಶೃಂಗಾರಗೊಳಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡಿದ್ದು ಒಂದು ವಿಶೇಷವಾಗಿತ್ತು. ಗ್ರಾಮದ ಗಂಡನ ಮನೆಯಾದ ವೀರಭದ್ರಸ್ವಾಮಿ ದೇವಾಲಯದಿಂದ ಸಂಪ್ರದಾಯದಂತೆ ಗೌರಿದೇವಿಯನ್ನು ಬೆಳಗಿನ ಜಾವ ಸುಮಾಎಉ 3.30ರಲ್ಲಿ ಎಡೆಮುಡಿ ಮೇಲೆ ಗೌರಿಯನ್ನು ಮೆರವಣಿಗೆಯ ಮೂಲಕ ತವರು ಮನೆಗೆ ಕರೆ ತರಲಾಯಿತು.ಊರಿನಲ್ಲಿ ಗುಡಿ ನಿರ್ಮಿಸಿ ಜಾತ್ರೆ ಮಾಡುತ್ತಿದ್ದರು ಎಂಬ ಪ್ರತೀತಿ ಇದೆ.ನಾವು ಸಹ ಹಿರಿಯರ ಆಶಯದಂತೆ ಮುಂದುವರೆಸಿಕೊಂಡು ಬರಲಾಗಿದೆ ಎಂಬುದು ಭಕ್ತರ ನಂಬಿಕೆ.

ಗೌರಿದೇವಿ ಜಾತ್ರೆ ಮೂಲತಃ ಹೆಣ್ಣು ಮಕ್ಕಳ ಹಬ್ಬ. ದೇವಿಗೆ ಪೂಜಾ ಕೈಂಕರ್ಯ ನಡೆಸುವವರೆಲ್ಲ ಒಪ್ಪತ್ತು ಮಾತ್ರ ಊಟ ಮಾಡಬೇಕು. ಆಚರಣೆಯಂತೆ ವಿದಿವಿಧಾನದಂತೆ ಸಮಂಗಲಿಯರು ಮಧ್ಯೆ ರಾತ್ರಿ ತಣ್ಣಿರಿನ ಸ್ನಾನ ಬಣ್ಣಬಣ್ಣದ ಮಡಿ ಸೀರೆಗಳನ್ನು ಉಟ್ಟುಕೊಂಡು ಮಂಜಾನೆ ದೇವಿಗೆ ಮಹಾ ಮಂಗಳಾರತಿ ಸಮರ್ಪಿಸಿದರು.

ದಿನವೆಲ್ಲ ಉಪವಾಸವಿರುವ ಪುರುಷರು ನಂತರ ರಾತ್ರಿ  ಚಳಿಯನ್ನು ಲೆಕ್ಕಿಸದೆ ತಣ್ಣಿರಿನಲ್ಲಿ ಸ್ನಾನಮಾಡಿ ದೇವಿಯನ್ನು ತವರು ಮನೆಯಿಂದ ಕರೆ ತರುವ ಸಂದರ್ಭದಲ್ಲಿ ಡಿಂಡುರುಳು ಸೇವೆ ಅರ್ಪಿಸಿದರು. ಇವರಿಗೆ ಮಹಿಳೆಯರು ಆರತಿ ಹಿಡಿಯುವ ಮೂಲಕ ಪ್ರೋತ್ಸಾಹ ನೀಡಿ ಚಳಿಯಲ್ಲು ಜಾತ್ರೆ ಕಳೆಕಟ್ಟುವಂತೆ ಮಾಡಿದರು.

ಕಂಕಣ ಬಲ ಕೂಡಿ ಬರಲು, ಒಳ್ಳೆಯ ಪತಿ ದೊರೆಯಲೆಂದು ಯುವತಿಯರು ದಿಂಡುರುಳು ಮತ್ತು ಆರತಿ ಹಿಡಿಯುವ ಹರಕೆ ಅರ್ಪಿಸಿದರು. ಮಕ್ಕಳ ಫಲ ಲಭಿಸಲಿ ಎಂದು ಮಕ್ಕಳಿಲ್ಲದವರು ಹೂವಿನ ತೊಟ್ಟಿಲ ಹರಕೆ ತೀರಿಸಿ ದೇವಿಯಲ್ಲಿ ತಮ್ಮ ಇಷ್ಟಾರ್ಥಗಳನ್ನು ಪುರೈಸು ಎಂಬ ಭಾವ ಮಹಿಳೆಯರಲ್ಲಿ ಎದ್ದು ಕಾಣುತ್ತಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು