3:16 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಳ್ಳಕೆರೆ ದೊಡ್ಡಉಳ್ಳಾರ್ತಿ ಜಾತ್ರೆ  ಸಮಾಪನ: ಗೌರಿದೇವಿ ವಿಸರ್ಜನೆ; ಮಕ್ಕಳಿಗಾಗಿ ಹೂ ತೊಟ್ಟಿಲ ಸೇವೆ

23/11/2021, 19:16

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿಯ ಶ್ರೀಗೌರಿದೇವಿ ಜಾತ್ರೆ ಸಡಗರ ಸಂಭ್ರಮದಿಂದ ನಡೆದಿದ್ದು, ಗೌರಿದೇವಿ ವಿಸರ್ಜನೆ ಕಾರ್ಯ ನೆರವೇರಿತು.

ಗೌರಿ ದೇವಿಯ ಮೂರ್ತಿಗೆ ದೀಪಾಲಂಕರದಿಂದ ಶೃಂಗಾರಗೊಳಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡಿದ್ದು ಒಂದು ವಿಶೇಷವಾಗಿತ್ತು. ಗ್ರಾಮದ ಗಂಡನ ಮನೆಯಾದ ವೀರಭದ್ರಸ್ವಾಮಿ ದೇವಾಲಯದಿಂದ ಸಂಪ್ರದಾಯದಂತೆ ಗೌರಿದೇವಿಯನ್ನು ಬೆಳಗಿನ ಜಾವ ಸುಮಾಎಉ 3.30ರಲ್ಲಿ ಎಡೆಮುಡಿ ಮೇಲೆ ಗೌರಿಯನ್ನು ಮೆರವಣಿಗೆಯ ಮೂಲಕ ತವರು ಮನೆಗೆ ಕರೆ ತರಲಾಯಿತು.ಊರಿನಲ್ಲಿ ಗುಡಿ ನಿರ್ಮಿಸಿ ಜಾತ್ರೆ ಮಾಡುತ್ತಿದ್ದರು ಎಂಬ ಪ್ರತೀತಿ ಇದೆ.ನಾವು ಸಹ ಹಿರಿಯರ ಆಶಯದಂತೆ ಮುಂದುವರೆಸಿಕೊಂಡು ಬರಲಾಗಿದೆ ಎಂಬುದು ಭಕ್ತರ ನಂಬಿಕೆ.

ಗೌರಿದೇವಿ ಜಾತ್ರೆ ಮೂಲತಃ ಹೆಣ್ಣು ಮಕ್ಕಳ ಹಬ್ಬ. ದೇವಿಗೆ ಪೂಜಾ ಕೈಂಕರ್ಯ ನಡೆಸುವವರೆಲ್ಲ ಒಪ್ಪತ್ತು ಮಾತ್ರ ಊಟ ಮಾಡಬೇಕು. ಆಚರಣೆಯಂತೆ ವಿದಿವಿಧಾನದಂತೆ ಸಮಂಗಲಿಯರು ಮಧ್ಯೆ ರಾತ್ರಿ ತಣ್ಣಿರಿನ ಸ್ನಾನ ಬಣ್ಣಬಣ್ಣದ ಮಡಿ ಸೀರೆಗಳನ್ನು ಉಟ್ಟುಕೊಂಡು ಮಂಜಾನೆ ದೇವಿಗೆ ಮಹಾ ಮಂಗಳಾರತಿ ಸಮರ್ಪಿಸಿದರು.

ದಿನವೆಲ್ಲ ಉಪವಾಸವಿರುವ ಪುರುಷರು ನಂತರ ರಾತ್ರಿ  ಚಳಿಯನ್ನು ಲೆಕ್ಕಿಸದೆ ತಣ್ಣಿರಿನಲ್ಲಿ ಸ್ನಾನಮಾಡಿ ದೇವಿಯನ್ನು ತವರು ಮನೆಯಿಂದ ಕರೆ ತರುವ ಸಂದರ್ಭದಲ್ಲಿ ಡಿಂಡುರುಳು ಸೇವೆ ಅರ್ಪಿಸಿದರು. ಇವರಿಗೆ ಮಹಿಳೆಯರು ಆರತಿ ಹಿಡಿಯುವ ಮೂಲಕ ಪ್ರೋತ್ಸಾಹ ನೀಡಿ ಚಳಿಯಲ್ಲು ಜಾತ್ರೆ ಕಳೆಕಟ್ಟುವಂತೆ ಮಾಡಿದರು.

ಕಂಕಣ ಬಲ ಕೂಡಿ ಬರಲು, ಒಳ್ಳೆಯ ಪತಿ ದೊರೆಯಲೆಂದು ಯುವತಿಯರು ದಿಂಡುರುಳು ಮತ್ತು ಆರತಿ ಹಿಡಿಯುವ ಹರಕೆ ಅರ್ಪಿಸಿದರು. ಮಕ್ಕಳ ಫಲ ಲಭಿಸಲಿ ಎಂದು ಮಕ್ಕಳಿಲ್ಲದವರು ಹೂವಿನ ತೊಟ್ಟಿಲ ಹರಕೆ ತೀರಿಸಿ ದೇವಿಯಲ್ಲಿ ತಮ್ಮ ಇಷ್ಟಾರ್ಥಗಳನ್ನು ಪುರೈಸು ಎಂಬ ಭಾವ ಮಹಿಳೆಯರಲ್ಲಿ ಎದ್ದು ಕಾಣುತ್ತಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು