3:46 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಚಳ್ಳಕೆರೆ ದೊಡ್ಡಉಳ್ಳಾರ್ತಿ ಜಾತ್ರೆ  ಸಮಾಪನ: ಗೌರಿದೇವಿ ವಿಸರ್ಜನೆ; ಮಕ್ಕಳಿಗಾಗಿ ಹೂ ತೊಟ್ಟಿಲ ಸೇವೆ

23/11/2021, 19:16

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿಯ ಶ್ರೀಗೌರಿದೇವಿ ಜಾತ್ರೆ ಸಡಗರ ಸಂಭ್ರಮದಿಂದ ನಡೆದಿದ್ದು, ಗೌರಿದೇವಿ ವಿಸರ್ಜನೆ ಕಾರ್ಯ ನೆರವೇರಿತು.

ಗೌರಿ ದೇವಿಯ ಮೂರ್ತಿಗೆ ದೀಪಾಲಂಕರದಿಂದ ಶೃಂಗಾರಗೊಳಿಸಿ ದೊಡ್ಡ ಹಬ್ಬದಂತೆ ಆಚರಣೆ ಮಾಡಿದ್ದು ಒಂದು ವಿಶೇಷವಾಗಿತ್ತು. ಗ್ರಾಮದ ಗಂಡನ ಮನೆಯಾದ ವೀರಭದ್ರಸ್ವಾಮಿ ದೇವಾಲಯದಿಂದ ಸಂಪ್ರದಾಯದಂತೆ ಗೌರಿದೇವಿಯನ್ನು ಬೆಳಗಿನ ಜಾವ ಸುಮಾಎಉ 3.30ರಲ್ಲಿ ಎಡೆಮುಡಿ ಮೇಲೆ ಗೌರಿಯನ್ನು ಮೆರವಣಿಗೆಯ ಮೂಲಕ ತವರು ಮನೆಗೆ ಕರೆ ತರಲಾಯಿತು.ಊರಿನಲ್ಲಿ ಗುಡಿ ನಿರ್ಮಿಸಿ ಜಾತ್ರೆ ಮಾಡುತ್ತಿದ್ದರು ಎಂಬ ಪ್ರತೀತಿ ಇದೆ.ನಾವು ಸಹ ಹಿರಿಯರ ಆಶಯದಂತೆ ಮುಂದುವರೆಸಿಕೊಂಡು ಬರಲಾಗಿದೆ ಎಂಬುದು ಭಕ್ತರ ನಂಬಿಕೆ.

ಗೌರಿದೇವಿ ಜಾತ್ರೆ ಮೂಲತಃ ಹೆಣ್ಣು ಮಕ್ಕಳ ಹಬ್ಬ. ದೇವಿಗೆ ಪೂಜಾ ಕೈಂಕರ್ಯ ನಡೆಸುವವರೆಲ್ಲ ಒಪ್ಪತ್ತು ಮಾತ್ರ ಊಟ ಮಾಡಬೇಕು. ಆಚರಣೆಯಂತೆ ವಿದಿವಿಧಾನದಂತೆ ಸಮಂಗಲಿಯರು ಮಧ್ಯೆ ರಾತ್ರಿ ತಣ್ಣಿರಿನ ಸ್ನಾನ ಬಣ್ಣಬಣ್ಣದ ಮಡಿ ಸೀರೆಗಳನ್ನು ಉಟ್ಟುಕೊಂಡು ಮಂಜಾನೆ ದೇವಿಗೆ ಮಹಾ ಮಂಗಳಾರತಿ ಸಮರ್ಪಿಸಿದರು.

ದಿನವೆಲ್ಲ ಉಪವಾಸವಿರುವ ಪುರುಷರು ನಂತರ ರಾತ್ರಿ  ಚಳಿಯನ್ನು ಲೆಕ್ಕಿಸದೆ ತಣ್ಣಿರಿನಲ್ಲಿ ಸ್ನಾನಮಾಡಿ ದೇವಿಯನ್ನು ತವರು ಮನೆಯಿಂದ ಕರೆ ತರುವ ಸಂದರ್ಭದಲ್ಲಿ ಡಿಂಡುರುಳು ಸೇವೆ ಅರ್ಪಿಸಿದರು. ಇವರಿಗೆ ಮಹಿಳೆಯರು ಆರತಿ ಹಿಡಿಯುವ ಮೂಲಕ ಪ್ರೋತ್ಸಾಹ ನೀಡಿ ಚಳಿಯಲ್ಲು ಜಾತ್ರೆ ಕಳೆಕಟ್ಟುವಂತೆ ಮಾಡಿದರು.

ಕಂಕಣ ಬಲ ಕೂಡಿ ಬರಲು, ಒಳ್ಳೆಯ ಪತಿ ದೊರೆಯಲೆಂದು ಯುವತಿಯರು ದಿಂಡುರುಳು ಮತ್ತು ಆರತಿ ಹಿಡಿಯುವ ಹರಕೆ ಅರ್ಪಿಸಿದರು. ಮಕ್ಕಳ ಫಲ ಲಭಿಸಲಿ ಎಂದು ಮಕ್ಕಳಿಲ್ಲದವರು ಹೂವಿನ ತೊಟ್ಟಿಲ ಹರಕೆ ತೀರಿಸಿ ದೇವಿಯಲ್ಲಿ ತಮ್ಮ ಇಷ್ಟಾರ್ಥಗಳನ್ನು ಪುರೈಸು ಎಂಬ ಭಾವ ಮಹಿಳೆಯರಲ್ಲಿ ಎದ್ದು ಕಾಣುತ್ತಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು