7:19 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ ಬಿಜೆಪಿ, ಕಾಂಗ್ರೆಸ್ ನಾಯಕಿಯರು!

24/11/2021, 17:01

ಮಂಗಳೂರು(reporterkarnataka.com): ನಗರದ ಹೊರವಲಯದ ಪರಾರಿಯಲ್ಲಿ 8ರ ಹರೆಯದ ಪುಟ್ಟ ಬಾಲಕಿಯ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಲ್ಲೋ ಉತ್ತರ ಭಾರತ ಕಡೆ ಅತ್ಯಾಚಾರ ನಡೆದರೆ ರಾಜಕೀಯ ಲಾಭಕ್ಕಾಗಿ ಬೀದಿಗಿಳಿದು ಕಿರುಚಾಡುವ ಬಿಜೆಪಿ ಮತ್ತು ಕಾಂಗ್ರೆಸ್ ನ ಮಹಿಳಾ ನಾಯಕಿಯರು ಈ ಕುರಿತು ತುಟಿ ಬಿಚ್ಚದೆ ಮೌನವಹಿಸಿದ್ದಾರೆ.

ಝರ್ಖಾಂಡ್ ನಿಂದ ಕೂಲಿ ಕೆಲಸಕ್ಕೆ ಬಂದ ನಾಲ್ವರು ಆರೋಪಿಗಳು ಬಾಲಕಿಯ ಮೇಲೆ ಮೃಗೀಯಾಗಿ ಅತ್ಯಾಚಾರ ನಡೆಸಿ, ಬಳಿಕ ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು

ಜೈಬಾನ್ ಅಲಿಯಾಸ್ ಜೈ ಸಿಂಗ್, ಮುಕೇಶ್ ಸಿಂಗ್, ಮನೀಶ್ ಟಿರ್ಕಿ ಹಾಗೂ ಮುನೀಮ್ ಸಿಂಗ್ ಎಂದು ಗುರುತಿಸಲಾಗಿದೆ.

8ರ ಹರೆಯದ ಬಾಲಕಿಗೆ ಚಾಕಲೇಟ್ ಹಾಗೂ ಸಿಹಿ ತಿಂಡಿಯ ಆಸೆ ತೋರಿಸಿ ಬಂಧಿತ ಆರೋಪಿಗಳಲ್ಲಿ ಇಬ್ಬರು ಈ ಹಿಂದೆ 3-4 ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ತಿಳಿದು ಬಂದಿದೆ.

ಈ ಇಬ್ಬರು ಕಾಮುಕರ ಜತೆ ಭಾನುವಾರ ದಿನ ಮತ್ತಿಬ್ಬರು ಜತೆ ಸೇರಿ ಅತ್ಯಾಚಾರ ಮಾಡಿದ್ದಾರೆ. 

ಬಾಲಕಿಗೆ ಸಿಕ್ಕಾಪಟ್ಟೆ ರಕ್ತಸ್ರಾವವಾದಾಗ ಸಿಕ್ಕಿಬೀಳಬಹುದು‌ ಎಂಬ ಭಯದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು