7:28 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ ಮಾಡಿದ ರೈತರು

25/11/2021, 15:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಾಯುಭಾರ  ಕುಸಿತದಿಂದ ರಾಜ್ಯಾದ್ಯಂತ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಜ್ಯದಲ್ಲಿ ರೈತನ ಕಷ್ಟ ಹೇಳಿ ತೀರದು.ಉತ್ತರ ಕರ್ನಟಕದಲ್ಲಿ ಮಳೆ ಏನೋ ಕಡಿಮೆ ಇದೆ, ಆದರೆ ಮೋಡ ಕವಿದ ವಾತಾವರಣದಿಂದ ವಾಣಿಜ್ಯ ಬೆಳೆ ದ್ರಾಕ್ಷಿ ಈಗ ರೋಗಕ್ಕೆ ತುತ್ತಾಗಿ ಬೆಳೆ ಸಂಪೂರ್ಣ ನಾಶವಾಗಿದೆ.


ಕೋವಿಡನಿಂದ್ ಸತತ ಎರಡು ವರ್ಷ ನಷ್ಟ ಅನುಭವಿಸಿದ ರೈತ ಈಗಲಾದರೂ ಲಾಭ ಆಗಬಹುದು ಎಂದು ರಾತ್ರಿ-ಹಗಲು ಕಷ್ಟಪಟ್ಟು ಇನ್ನೇನು ಬೆಳೆ ಚೆನ್ನಾಗಿ ಬಂತು ಅನ್ನೋವಷ್ಟರಲ್ಲಿ ಪ್ರಕೃತಿ ವಿಕೋಪಕ್ಕೆ ರೈತ ಬಲಿಪಶು ಆಗಿದ್ದಾನೆ.

ತುಂತುರು ಮಳೆಗೆ ದ್ರಾಕ್ಷಿ ಬೆಳೆ ಸಂಪೂರ್ಣ ಕೊಳೆತುಹೋಗಿವೆ. ಎಕರೆಗೆ ಸುಮಾರು ಎರಡರಿಂದ ಮೂರು ಲಕ್ಷ ರೂಪಾಯಿ ಖರ್ಚಾಗಿದ್ದು ಈಗ ಒಂದು ರೂಪಾಯಿ ಕೂಡ ನಮಗಿಲ್ಲ.  ಸೂಕ್ತ ಪರಿಹಾರ ಒದಗಿಸುವುದಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದ ರೈತ ಪಾಂಡುರಂಗಹಬಗುಂಡೆ ಮಾಧ್ಯಮದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಅಥಣಿ ತಾಲೂಕಿನ ಅನಂತಪುರ ಹೂಬಳಿ ವ್ಯಾಪ್ತಿಯಲ್ಲಿ ಸುಮಾರು 100ರಿಂದ 200 ಎಕರೆ ದ್ರಾಕ್ಷಿ ಬೆಳೆದ ರೈತರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪರಿಹಾರ ಒದಗಿಸಿ ಎಂದು ಮಾಂತೇಶ್ ಚಿಗ್ರೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಗ್ರಾಮದ ರೈತರಾದ ಪ್ರವೀಣ್ ಪವಾರ ಮಾತನಾಡಿ ನಾನು ಸುಮಾರು 60 ಲಕ್ಷ ಖರ್ಚು ಮಾಡಿ ದ್ರಾಕ್ಷಿ ಬೆಳೆ ಬೆಳೆದಿದ್ದೇನೆ. ಬಡ್ಡಿ ಸಹಿತ ಬಂದಿಲ್ಲ ಎಂದು ನೋವನ್ನ ಹಂಚಿಕೊಂಡರು ಏನೆ ಆಗಲಿ ನೊಂದ ರೈತರ ಕೈ ಹಿಡಿಯುತ್ತ ಸರ್ಕಾರ ಅನ್ನೋದನ್ನ ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು