12:43 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಬೊಕ್ಕಸವನ್ನು‌ ತುಂಬಿಸುವುದನ್ನು ಬಿಟ್ಟು, ಬಡ ವಿದ್ಯಾರ್ಥಿಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ: ಸವಾದ್ ಸುಳ್ಯ

30/05/2021, 21:39

ಮಂಗಳೂರು(reporterkarnatakanews): ದೇಶದಾದ್ಯಂತ ಕೊರೊನ ಅಟ್ಟಹಾಸ ಮಾನವ ಸಂಕುಲವನ್ನು ತಲ್ಲಣಗೊಳಿಸಿದ್ದರೆ ಜಿಲ್ಲೆಯ ಕೆಲವು ಖಾಸಗಿ ಶಾಲೆಗಳು ಇದರ ಪರಿವೇ ಇಲ್ಲದಂತೆ ವರ್ತಿಸುತ್ತಿದೆ.ಕಳೆದ ಒಂದು ವರ್ಷವಿಡೀ ಕೇವಲ ಆನ್ ಲೈನ್ ಕ್ಲಾಸ್ ನಡೆಸುವ ಮೂಲಕ ಬಡ ಪೋಷಕರ ಹಣವನ್ನು ಸುಲಿಗೆ ಮಾಡಿ ಅವರ ಜೋಳಿಗೆಯನ್ನು ತುಂಬಿಸಿಕೊಂಡರು.ಫೀಸ್ ಕಟ್ಟದವರನ್ನು ಆನ್ ಲೈನ್ ಕ್ಲಾಸ್ ಗಳಿಗೆ ಕೂಡ ತೆಗೆಯುತ್ತಿಲ್ಲ, ಆದರೆ ಈ ಬಡ ಪೋಷಕರು ಈ ಹಣವನ್ನು ಎಲ್ಲಿಂದ ಭರಿಸುವರೆಂದು ತಿಳಿದುಕೊಳ್ಳುವ ಒಂದು ಸಣ್ಣ ಮನಸ್ಸನ್ನು ಕೂಡ ಇವರು ತೋರಲಿಲ್ಲ. ಇದೀಗ ಕೋವಿಡ್ ಎರಡನೆಯ ಅಲೆ ಲಕ್ಷಾಂತರ ಮನುಷ್ಯ ಜೀವದ ಪ್ರಾಣವನ್ನೇ ತೆಗೆದಿದ್ದರೆ, ಈ ಖಾಸಗಿ ಶಾಲೆಗಳು ಮತ್ತೊಮ್ಮೆ ತಮ್ಮ ಬೊಕ್ಕಸ ತುಂಬಿಸುವ ಪ್ರವೃತಿಯನ್ನು ಪ್ರಾರಂಭಿಸಿದೆ. ಮಕ್ಕಳು ಕಳೆದ ಒಂದು ವರ್ಷದಿಂದ ಮನೆಯಲ್ಲಿಯೇ ಇದ್ದರೂ, ಮತ್ತೊಮ್ಮೆ ಆನ್ ಲೈನ್ ಕ್ಲಾಸ್ ಎಂಬ ಸಮಜಾಯಿಷಿ ನೀಡಿ, ಶಾಲೆಯ ಫೀಸು ಕಟ್ಟಲು ಮೊಬೈಲ್ ಗಳಲ್ಲಿ ಟೆಕ್ಸ್ಟ್ ಮೆಸೇಜ್ ಗಳ ಯುದ್ಧವನ್ನು ಆರಂಭಿಸಿದ್ದಾರೆ. ಒಬ್ಬ ಸಾಮಾನ್ಯ ಕುಟುಂಬದ ಪರಿಸ್ಥಿತಿ ಈ ಕೊರೊನ ಕಾಲದಲ್ಲಿ ಅರಿತವರಿಗೆ ‌ಗೊತ್ತು.ವ್ಯಾಪಾರ,‌ ವ್ಯವಹಾರ ಇಲ್ಲ. ಮನೆಯಲ್ಲಿ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿಯಲ್ಲಿರುವ ಈ ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ಮಕ್ಕಳನ್ನು ಕಳುಹಿಸುವ ಶಿಕ್ಷಣ ಸಂಸ್ಥೆಗಳ ಫೀಸು, ಡೊನೇಷನ್ ಕಟ್ಟಲು ಸಾದ್ಯವೇ?. ಹಲವಾರು ‌ಶಿಕ್ಷಣ ಸಂಸ್ಥೆಗಳು ಹೆಚ್ಚಿನ ವರಮಾನ ತರುವ ಸಂಸ್ಥೆ ಗಳನ್ನು ಹೊಂದಿರುವ ಮ್ಯಾನೇಜ್ ಮೆಂಟ್ ಗೆ ಪ್ರಸ್ತುತ ಸಂದರ್ಭದಲ್ಲಿ ತಮ್ಮ ಒಂದು ವರ್ಷದ ಫೀಸ್ ನ್ನು ಮನ್ನಾ ಮಾಡುವ ಸಹ್ರೃದಯ ಇಲ್ಲದೇ ಹೋದದ್ದು ವಿಪರ್ಯಾಸವೇ ಸರಿ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಬೇಕು, ಈ ಸಮಸ್ಯೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು