6:30 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಉಡುಪಿ ಜುವೆಲ್ಲರಿಯಿಂದ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು: ಗ್ರಾಹಕರ ಸೋಗಿನಲ್ಲಿ ಬಂದ ಆ ಮಹಿಳೆಯರು ಮಾಡಿದ್ದೇನು? 

25/11/2021, 18:06

ಉಡುಪಿ(reporterkarnataka.com): ಸೇಲ್ಸ್‌ ಮೆನ್‌ ನ ಗಮನ ಬೇರೆಡೆಗೆ ಸೆಳೆದು ಇಬ್ಬರು ಮಹಿಳೆಯರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಬಳೆಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಸುಲ್ತಾನ್‌ ಡೈಮಂಡ್‌ & ಗೋಲ್ಡ್‌ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ನಡೆದಿದೆ. 

ನ.23ರಂದು ಸಂಜೆ 6.15ರ ಸುಮಾರಿಗೆ ಉಡುಪಿ ವಿದ್ಯಾಸಮುದ್ರ ಮಾರ್ಗದಲ್ಲಿರುವ 

ಸುಲ್ತಾನ್‌ ಡೈಮಂಡ್‌ & ಗೋಲ್ಡ್‌ ಆಭರಣ  ಮಳಿಗೆಗೆ ಆಭರಣ ಖರೀದಿಸುವ ನೆಪದಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಬ್ಬರು ಬಂದಿದ್ದು, ಅವರಿಗೆ ಮಳಿಗೆಯ ಮೊಹಮ್ಮದ್‌ ಮುಬಾರಕ್‌ ಚಿನ್ನದ ಬಳೆಗಳನ್ನು ತೋರಿಸಿದ್ದಾರೆ. ಆದರೆ ಆರೋಪಿ ಮಹಿಳೆಯರಿಬ್ಬರು ಮುಬಾರಕ್ ಅವರ ಗಮನವನ್ನು ಬೇರೆಡೆಗೆ ಸೆಳೆದು ಒಟ್ಟು 60 ಗ್ರಾಂ ತೂಕದ ₹3 ಲಕ್ಷ ಮೌಲ್ಯದ 4 ಚಿನ್ನದ ಬಳೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಜ್ಯುವೆಲ್ಲರ್ಸ್ ಮಳಿಗೆಯ ಮ್ಯಾನೇಜರ್ ಮೊಹಮ್ಮದ್‌ ಅಜ್ಮಲ್‌ ನೀಡಿರುವ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು