10:58 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಉಡುಪಿ ಜುವೆಲ್ಲರಿಯಿಂದ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು: ಗ್ರಾಹಕರ ಸೋಗಿನಲ್ಲಿ ಬಂದ ಆ ಮಹಿಳೆಯರು ಮಾಡಿದ್ದೇನು? 

25/11/2021, 18:06

ಉಡುಪಿ(reporterkarnataka.com): ಸೇಲ್ಸ್‌ ಮೆನ್‌ ನ ಗಮನ ಬೇರೆಡೆಗೆ ಸೆಳೆದು ಇಬ್ಬರು ಮಹಿಳೆಯರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಬಳೆಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಸುಲ್ತಾನ್‌ ಡೈಮಂಡ್‌ & ಗೋಲ್ಡ್‌ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ನಡೆದಿದೆ. 

ನ.23ರಂದು ಸಂಜೆ 6.15ರ ಸುಮಾರಿಗೆ ಉಡುಪಿ ವಿದ್ಯಾಸಮುದ್ರ ಮಾರ್ಗದಲ್ಲಿರುವ 

ಸುಲ್ತಾನ್‌ ಡೈಮಂಡ್‌ & ಗೋಲ್ಡ್‌ ಆಭರಣ  ಮಳಿಗೆಗೆ ಆಭರಣ ಖರೀದಿಸುವ ನೆಪದಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಬ್ಬರು ಬಂದಿದ್ದು, ಅವರಿಗೆ ಮಳಿಗೆಯ ಮೊಹಮ್ಮದ್‌ ಮುಬಾರಕ್‌ ಚಿನ್ನದ ಬಳೆಗಳನ್ನು ತೋರಿಸಿದ್ದಾರೆ. ಆದರೆ ಆರೋಪಿ ಮಹಿಳೆಯರಿಬ್ಬರು ಮುಬಾರಕ್ ಅವರ ಗಮನವನ್ನು ಬೇರೆಡೆಗೆ ಸೆಳೆದು ಒಟ್ಟು 60 ಗ್ರಾಂ ತೂಕದ ₹3 ಲಕ್ಷ ಮೌಲ್ಯದ 4 ಚಿನ್ನದ ಬಳೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಜ್ಯುವೆಲ್ಲರ್ಸ್ ಮಳಿಗೆಯ ಮ್ಯಾನೇಜರ್ ಮೊಹಮ್ಮದ್‌ ಅಜ್ಮಲ್‌ ನೀಡಿರುವ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು