11:26 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಮುಂಗಾರು ಬಿತ್ತನೆಗೆ ಅನ್ನದಾತ ಸಜ್ಜು: ಬಿತ್ತನೆ ಬೀಜಕ್ಕೆ ಪ್ರಸ್ತಾವನೆ; ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಸೂಚನೆ

31/05/2021, 07:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೋವಿಡ್ ಸಮಯದಲ್ಲೂ ಕೃಷಿ ಚಟುವಟಿಕೆ ಗ್ರಾಮೀಣ ಭಾಗದಲ್ಲಿ ಗರಿಗೆದರಿವೆ. ಮುಂಗಾರು ಹಂಗಾಮಿನ ಹೊಲಗಳನ್ನು ಹದಗೊಳಿಸು ಕಾರ್ಯ ಅದ್ಭುತವಾಗಿ ನಡೆದಿದೆ. ಬಿತ್ತನೆ ಬೀಜಗಳ ಪೂರೈಕೆಗೆ ಈಗಾಗಲೇ ಕೃಷಿ ಇಲಾಖೆ ಕಳಿಸಲಾಗಿದೆ. ಕೃಷಿ ಇಲಾಖೆ ಪ್ರಸ್ತಾವನೆ ಪ್ರಕಾರ ಬೀಜ ಪೂರೈಕೆ ಆಗಲಿದೆ. 

ಈ ನಡುವೆ ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಜೂನ್ ಮೊದಲನೇ ವಾರ ಬರುವ ಮುಂಗಾರುನಲ್ಲೂ ಉತ್ತಮ ಮಳೆ ಆಗುವ ಲಕ್ಷಣಗಳು ಕಂಡು ಬಂದಿವೆ. ಕೊರೊನಾ ಎರಡನೆಯ ಲಾಕ್ ಡೌನ್  ರೈತರನ್ನು ಸ್ವಲ್ಪ ಕಷ್ಟಕ್ಕೆ ಸಿಲುಕಿಸಿದೆ. ರಸಗೊಬ್ಬರ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. 

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಸೂಚಿಸಲಾಗಿದೆ. ಸಹಾಯಕ ಕೃಷಿ ನಿರ್ದೇಶಕಿ ಡಾ. ಎಸ್ ಪ್ರಿಯಾಂಕ,

ಮುಂಗಾರಿನಲ್ಲಿ ಕೃಷಿ ಚಟುವಟಿಕೆಗಳು ಬಿತ್ತನೆ ಕುರಿತು ಬೀಜಗಳನ್ನು ಪೂರೈಕೆ ಪ್ರಸ್ತಾವನೆಗೆ ಕಳಿಸಿಕೊಡಲಾಗಿದೆ.

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಈಗಾಗಲೇ ಸೂಚಿಸಲಾಗಿದೆ. ಮಾರಾಟ ದರ ಪಟ್ಟಿ ಹಾಕಿ ಕೋವಿಡ್ ನಿಯಮ ಪಾಲಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಹೇಳಲಾಗಿದೆ.

ಈ ನಡುವೆ ಮಸ್ಕಿ ಕ್ಷೇತ್ರದ ಅಂತರಗಂಗೆ, ಮೆದಿಕಿನಾಳ, ಅಂಕುಶದೊಡ್ಡಿ, ತಲೆಕಾನ್ , ಗುಡದೂರು, ಹಂಪನಾಳ, ನಾಗರಬೆಂಚಿ ಸುತ್ತಮುತ್ತಲಿನ ಗ್ರಾಮಸ್ಥರು ಮುಂಗಾರು ಬಿತ್ತನೆಗಾಗಿ ಭರ್ಜರಿ ಹೊಲಗಳ ಹದ ಮಾಡಿ ಕೆಲಸ ಮಾಡುವ ದೃಶ್ಯ ಕಂಡುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು