2:18 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನ ವಿವಾದ ಇತ್ಯರ್ಥ; ಬಸ್ರೂರು ರಾಜೀವ ಶೆಟ್ಟಿಗೆ ಅಧಿಕಾರ ಹಸ್ತಾಂತರ

25/11/2021, 20:34

ಉಡುಪಿ(reporterkarnataka.com): ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನದ ಕುರಿತ ವಿವಾದ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಇತ್ಯರ್ಥಗೊಂಡಿದೆ. ಹಾಲಿ ಸಭಾಪತಿ ತಲ್ಲೂರು ಶಿವರಾಮ ಶೆಟ್ಟಿ ಅವರು ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು. 

ಇದೇ ವೇಳೆ ಗೌರವ ಕಾರ್ಯದರ್ಶಿ ಹುದ್ದೆಯನ್ನು ಬಾಲಕೃಷ್ಣ ಶೆಟ್ಟಿ ಅವರಿಗೆ ಮತ್ತೆ ಹಸ್ತಾಂತರಿಸಲಾಯಿತು.

ಏನಿದು ವಿವಾದ?: ಬಸ್ರೂರು ರಾಜೀವ ಶೆಟ್ಟಿ ಹಾಗೂ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ವಿರುದ್ಧ ಹಣ ದುರುಪಯೋಗ ಮಾಡಿರುವ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ ಅವರು ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸಭಾಪತಿ ಸ್ಥಾನಕ್ಕೆ ನೇಮಿಸಿದ್ದರು. ಇದರ ವಿರುದ್ಧ ಬಸ್ರೂರು ರಾಜೀವ ಶೆಟ್ಟಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ ನ್ಯಾಯಾಧೀಶರಾದ ವೀರಪ್ಪ ಮತ್ತು ರೇಖಾ ಅವರು ಪ್ರಕರಣ ಕೈಗೆತ್ತಿಕೊಂಡು ತಲ್ಲೂರು ಶಿವರಾಮ ಶೆಟ್ಟಿ, ಎಸ್. ನಾಗಣ್ಣ ಮತ್ತು ಜಿ. ಜಗದೀಶ್ ವಿರುದ್ಧ ನ್ಯಾಯಾಂಗ ನಿಂದನೆ ಆದೇಶ ನೀಡಿದ್ದು, ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಅಧಿಕಾರ ಹಸ್ತಾಂತರಿಸುವಂತೆ ಆದೇಶ ನೀಡಿದ್ದರು. ಅದರಂತೆ ಇಂದು ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಸಭಾಪತಿ ಸ್ಥಾನ ಹಾಗೂ ಕಾರ್ಯದರ್ಶಿ ಸ್ಥಾನವನ್ನು ಬಾಲಕೃಷ್ಣ ಶೆಟ್ಟಿ ಅವರಿಗೆ ಹಸ್ತಾಂತರ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು