2:48 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನ ವಿವಾದ ಇತ್ಯರ್ಥ; ಬಸ್ರೂರು ರಾಜೀವ ಶೆಟ್ಟಿಗೆ ಅಧಿಕಾರ ಹಸ್ತಾಂತರ

25/11/2021, 20:34

ಉಡುಪಿ(reporterkarnataka.com): ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನದ ಕುರಿತ ವಿವಾದ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಇತ್ಯರ್ಥಗೊಂಡಿದೆ. ಹಾಲಿ ಸಭಾಪತಿ ತಲ್ಲೂರು ಶಿವರಾಮ ಶೆಟ್ಟಿ ಅವರು ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು. 

ಇದೇ ವೇಳೆ ಗೌರವ ಕಾರ್ಯದರ್ಶಿ ಹುದ್ದೆಯನ್ನು ಬಾಲಕೃಷ್ಣ ಶೆಟ್ಟಿ ಅವರಿಗೆ ಮತ್ತೆ ಹಸ್ತಾಂತರಿಸಲಾಯಿತು.

ಏನಿದು ವಿವಾದ?: ಬಸ್ರೂರು ರಾಜೀವ ಶೆಟ್ಟಿ ಹಾಗೂ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ವಿರುದ್ಧ ಹಣ ದುರುಪಯೋಗ ಮಾಡಿರುವ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ ಅವರು ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸಭಾಪತಿ ಸ್ಥಾನಕ್ಕೆ ನೇಮಿಸಿದ್ದರು. ಇದರ ವಿರುದ್ಧ ಬಸ್ರೂರು ರಾಜೀವ ಶೆಟ್ಟಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ ನ್ಯಾಯಾಧೀಶರಾದ ವೀರಪ್ಪ ಮತ್ತು ರೇಖಾ ಅವರು ಪ್ರಕರಣ ಕೈಗೆತ್ತಿಕೊಂಡು ತಲ್ಲೂರು ಶಿವರಾಮ ಶೆಟ್ಟಿ, ಎಸ್. ನಾಗಣ್ಣ ಮತ್ತು ಜಿ. ಜಗದೀಶ್ ವಿರುದ್ಧ ನ್ಯಾಯಾಂಗ ನಿಂದನೆ ಆದೇಶ ನೀಡಿದ್ದು, ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಅಧಿಕಾರ ಹಸ್ತಾಂತರಿಸುವಂತೆ ಆದೇಶ ನೀಡಿದ್ದರು. ಅದರಂತೆ ಇಂದು ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಸಭಾಪತಿ ಸ್ಥಾನ ಹಾಗೂ ಕಾರ್ಯದರ್ಶಿ ಸ್ಥಾನವನ್ನು ಬಾಲಕೃಷ್ಣ ಶೆಟ್ಟಿ ಅವರಿಗೆ ಹಸ್ತಾಂತರ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು