1:46 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನ ವಿವಾದ ಇತ್ಯರ್ಥ; ಬಸ್ರೂರು ರಾಜೀವ ಶೆಟ್ಟಿಗೆ ಅಧಿಕಾರ ಹಸ್ತಾಂತರ

25/11/2021, 20:34

ಉಡುಪಿ(reporterkarnataka.com): ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನದ ಕುರಿತ ವಿವಾದ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಇತ್ಯರ್ಥಗೊಂಡಿದೆ. ಹಾಲಿ ಸಭಾಪತಿ ತಲ್ಲೂರು ಶಿವರಾಮ ಶೆಟ್ಟಿ ಅವರು ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು. 

ಇದೇ ವೇಳೆ ಗೌರವ ಕಾರ್ಯದರ್ಶಿ ಹುದ್ದೆಯನ್ನು ಬಾಲಕೃಷ್ಣ ಶೆಟ್ಟಿ ಅವರಿಗೆ ಮತ್ತೆ ಹಸ್ತಾಂತರಿಸಲಾಯಿತು.

ಏನಿದು ವಿವಾದ?: ಬಸ್ರೂರು ರಾಜೀವ ಶೆಟ್ಟಿ ಹಾಗೂ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ವಿರುದ್ಧ ಹಣ ದುರುಪಯೋಗ ಮಾಡಿರುವ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ ಅವರು ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸಭಾಪತಿ ಸ್ಥಾನಕ್ಕೆ ನೇಮಿಸಿದ್ದರು. ಇದರ ವಿರುದ್ಧ ಬಸ್ರೂರು ರಾಜೀವ ಶೆಟ್ಟಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ ನ್ಯಾಯಾಧೀಶರಾದ ವೀರಪ್ಪ ಮತ್ತು ರೇಖಾ ಅವರು ಪ್ರಕರಣ ಕೈಗೆತ್ತಿಕೊಂಡು ತಲ್ಲೂರು ಶಿವರಾಮ ಶೆಟ್ಟಿ, ಎಸ್. ನಾಗಣ್ಣ ಮತ್ತು ಜಿ. ಜಗದೀಶ್ ವಿರುದ್ಧ ನ್ಯಾಯಾಂಗ ನಿಂದನೆ ಆದೇಶ ನೀಡಿದ್ದು, ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಅಧಿಕಾರ ಹಸ್ತಾಂತರಿಸುವಂತೆ ಆದೇಶ ನೀಡಿದ್ದರು. ಅದರಂತೆ ಇಂದು ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಸಭಾಪತಿ ಸ್ಥಾನ ಹಾಗೂ ಕಾರ್ಯದರ್ಶಿ ಸ್ಥಾನವನ್ನು ಬಾಲಕೃಷ್ಣ ಶೆಟ್ಟಿ ಅವರಿಗೆ ಹಸ್ತಾಂತರ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು