12:15 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನ ವಿವಾದ ಇತ್ಯರ್ಥ; ಬಸ್ರೂರು ರಾಜೀವ ಶೆಟ್ಟಿಗೆ ಅಧಿಕಾರ ಹಸ್ತಾಂತರ

25/11/2021, 20:34

ಉಡುಪಿ(reporterkarnataka.com): ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನದ ಕುರಿತ ವಿವಾದ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಇತ್ಯರ್ಥಗೊಂಡಿದೆ. ಹಾಲಿ ಸಭಾಪತಿ ತಲ್ಲೂರು ಶಿವರಾಮ ಶೆಟ್ಟಿ ಅವರು ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು. 

ಇದೇ ವೇಳೆ ಗೌರವ ಕಾರ್ಯದರ್ಶಿ ಹುದ್ದೆಯನ್ನು ಬಾಲಕೃಷ್ಣ ಶೆಟ್ಟಿ ಅವರಿಗೆ ಮತ್ತೆ ಹಸ್ತಾಂತರಿಸಲಾಯಿತು.

ಏನಿದು ವಿವಾದ?: ಬಸ್ರೂರು ರಾಜೀವ ಶೆಟ್ಟಿ ಹಾಗೂ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ವಿರುದ್ಧ ಹಣ ದುರುಪಯೋಗ ಮಾಡಿರುವ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ ಅವರು ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸಭಾಪತಿ ಸ್ಥಾನಕ್ಕೆ ನೇಮಿಸಿದ್ದರು. ಇದರ ವಿರುದ್ಧ ಬಸ್ರೂರು ರಾಜೀವ ಶೆಟ್ಟಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ ನ್ಯಾಯಾಧೀಶರಾದ ವೀರಪ್ಪ ಮತ್ತು ರೇಖಾ ಅವರು ಪ್ರಕರಣ ಕೈಗೆತ್ತಿಕೊಂಡು ತಲ್ಲೂರು ಶಿವರಾಮ ಶೆಟ್ಟಿ, ಎಸ್. ನಾಗಣ್ಣ ಮತ್ತು ಜಿ. ಜಗದೀಶ್ ವಿರುದ್ಧ ನ್ಯಾಯಾಂಗ ನಿಂದನೆ ಆದೇಶ ನೀಡಿದ್ದು, ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಅಧಿಕಾರ ಹಸ್ತಾಂತರಿಸುವಂತೆ ಆದೇಶ ನೀಡಿದ್ದರು. ಅದರಂತೆ ಇಂದು ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಸಭಾಪತಿ ಸ್ಥಾನ ಹಾಗೂ ಕಾರ್ಯದರ್ಶಿ ಸ್ಥಾನವನ್ನು ಬಾಲಕೃಷ್ಣ ಶೆಟ್ಟಿ ಅವರಿಗೆ ಹಸ್ತಾಂತರ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು