7:18 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ

26/11/2021, 08:25

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ವೇದಾವತಿ ನದಿ ಹಾಗೂ ಬ್ಯಾರೇಜ್‍ಗಳು ತುಂಬಿ ಹರಿಯುತ್ತಿದ್ದು, ನಗರ ಹಾಗೂ ಗಾಮೀಣ ಭಾಗದಿಂದ ಡ್ಯಾಂ ವೀಕ್ಷಣೆಗೆ ಬಂದವರಿಗೆ ನದಿಯಲ್ಲಿ ಈಜದಂತೆ ಹಾಗೂ ನೀರಿಗಿಳಿದು ಸೆಲ್ಫಿ ತೆಗೆಯದಂತೆ ಅಧಿಕಾರಿಗಳು ಮನವರಿಕೆ ಮಾಡುವಂತೆ ಶಾಸಕ ಟಿ.ರಘುಮೂರ್ತಿ ಸೂಚಿಸಿದರು.


ಹಾಲಗೊಂಡನಹಳ್ಳಿ ಗ್ರಾಮದ ಸಮೀಪದ ವೇದಾವತಿ ನದಿಯ ಬ್ಯಾರೇಜ್ ಹಿನ್ನೀರಿನಲ್ಲಿ ಕುಟುಂಬದ ಸದಸ್ಯರೊಂದಿಗೆ ಡ್ಯಾಂ ವೀಕ್ಷಣೆಗೆ ಬಂದವರಲ್ಲಿ ಇಬ್ಬರು ನೀರುಪಾಲಾದ ಸ್ಥಳಕ್ಕೆ ಭೇಟಿ ನೀಡಿದ ಅವರು ಮಾಧ್ಯಮ ಜತೆ ಮಾತನಾಡಿದರು.

ಚಳ್ಳಕೆರೆಯ ವಿರುಪಾಕ್ಷಪ್ಪ ಅವರು ಸಂಬಂಧಿಕರೊಂದಿಗೆ ಹಾಲಗೊಂಡನಹಳ್ಳಿ ಬ್ಯಾರೇಜ್ ನೀರು ವೀಕ್ಷಣೆ ಮಾಡಲು ಬಂದಿದ್ದಾಗ ಆಕಸ್ಮಿಕವಾಗಿ 8 ವರ್ಷದ ಬಾಲಕಿ ಮೋನಿಷ ನೀರಿಗೆ ಬಿದ್ದಿದ್ದಳು. ಅವಳ ರಕ್ಷಣೆ ಮಾಡಲು  ವಿರುಪಾಕ್ಷಪ್ಪ ನೀರಿಗೆ ಹಾರಿದ್ದರು. ಆದರೆ ದುರಾದೃಷ್ಟವಶಾತ್ ಇಬ್ಬರೂ ನೀರುಪಾಲಾಗಿದ್ದರು.

ಮೃತದೇಹಗಳ ಶೋಧ ಕಾರ್ಯಾಚರಣೆ ವೀಕ್ಷಣೆ ಮಾಡಿದ ಶಾಸಕರು, ನದಿಯಲ್ಲಿ ಈಜಲು ಹಾಗೂ ನೀರಿಗಿಳಿದು ಸೆಲ್ಫಿ ತೆಗೆಯುವವರೂ ಮೇಲೆ ಅಧಿಕಾರಿಗಳು ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ನದಿಯಲ್ಲಿ ನೀರು ತುಂಬಾ ರಭಸವಾಗಿ ಹರಿಯುತ್ತಿರುವುದರಿಂದ ಹರಿಯುವ ನೀರಿನಲ್ಲಿ ಬಟ್ಟೆ ಹೊಗೆಯುವುದು, ಜಾನುವಾರುಗಳಿಗೆ ಮೈ ತೊಳೆಯುವುದು, ಬೈಕ್, ಎತ್ತಿನ ಗಾಡಿಗಳನ್ನು ನೀರಿನಲ್ಲಿ ಇಳಿಸುವುದು ಯಾರು ಮಾಡಬಾರದು ಎಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದರು.


ಸ್ಥಳದಲ್ಲಿ ತಹಶೀಲ್ದಾರ್ ಎನ್. ರಘುಮೂರ್ತಿ, ಡಿವೈಎಸ್ಪಿ ಕೆ.ವಿ.ಶ್ರೀಧರ್, ಸಿಪಿಐ ಜೆ.ಎಸ್.ತಿಪ್ಪೇಸ್ವಾಮಿ, ಪಿಎಸ್‍ಐ ಸ್ವಾತಿ, ಎಎಸ್‍ಐ ರವೀಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಬಿ.ಜಯಣ್ಣ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು, ಸೂರನಹಳ್ಳಿ ಶ್ರೀನಿವಾಸ್ ಇತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು