12:41 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ ಭಕ್ತೆಯಾದ ಆಕೆ ಹೇಳಿದ್ದೇನು ?

26/11/2021, 09:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆ ಭಿಕ್ಷುಕಿ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷರನ್ನು ಹುಡುಕುತ್ತಿದ್ದಳು.

ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಭಿಕ್ಷುಕಿಯನ್ನ ಓಡಿಸಲು ಪ್ರಯತ್ನಿಸುತ್ತಿದ್ದರು.

ಆದರೆ ಭಿಕ್ಷುಕಿ ಸೀದಾ ದೇವಸ್ಥಾನದ ಒಳಕ್ಕೆ ಹೋಗಿ ಸ್ವಾಮೀಜಿ ಕೈಗೆ 500ರ 20 ನೋಟು ಕೊಟ್ಲು. ಈ ಹಣದಲ್ಲಿ ಆಂಜನೇಯನಿಗೆ ಬೆಳ್ಳಿಯ ಮುಖವಾಡ ಮಾಡಿಸಿ ಎಂದು ಬೇಡಿಕೆ ಇಟ್ಟಳು.

ಭಿಕ್ಷುಕಿ ಅಜ್ಜಿಯ ದೊಡ್ಡತನಕ್ಕೆ ನೆರೆದಿದ್ದವರೆಲ್ಲಾ ಶಾಕ್. ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಕಡೂರಿನ ಸಾಯಿಬಾಬಾ ದೇವಸ್ಥಾನದ ಬಳಿ ಭಿಕ್ಷೆ ಬೇಡುವ ಕೆಂಪಜ್ಜಿಯಿಂದ ಈ ದೇಣಿಗೆ ಬಂದಿದೆ

ಸಾವಿರ ಜನ ಲಕ್ಷ ಕೊಟ್ರು ಈ 10 ಸಾವಿರ ಮೌಲ್ಯದ್ದು ಅಂದ್ರು ಜನ. ಕೊನೆಗೆ ಭಿಕ್ಷುಕಿ ಅಜ್ಜಿ ದೇವಸ್ಥಾನದ ಮುಂದೆ ಸೆಲ್ಫಿಗೆ ಫೋಸ್ ನೀಡಿದ್ಲು. 

ಇತ್ತೀಚಿನ ಸುದ್ದಿ

ಜಾಹೀರಾತು