3:30 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಿಜೆಪಿಯವರಿಗಿಂತ ಪಕ್ಷೇತರರ ಸ್ಪರ್ಧೆ ನಮಗೆ ಸಮಸ್ಯೆಯಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

26/11/2021, 11:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಧಾನ ಪರಿಷತ್ ಚುಣಾವಣೆಯಲ್ಲಿ ಬಿಜೆಪಿಗಿಂತ ನಮಗೆ ಪಕ್ಷೇತರ ಸಮಸ್ಯೆ ಬಹಳವಾಗಿದೆ. ಈ ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸುವುದರಿಂದ ಎರಡೂ ಪಕ್ಷದವರಿಗೆ ಗೊಂದಲವಾಗಿದೆ. ಇದರಿಂದ ಎರಡೂ ಪಕ್ಷದವರು‌ ವಿಶೇಷ ತಂತ್ರಗಳನ್ನು ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಅವರು ಸ್ಥಳೀಯ ಆರ್.ಎಚ್. ಕುಲಕರ್ಣಿ ಸಭಾ ಭವನದಲ್ಲಿ ಹಮ್ಮಿಕೊಂಡ ವಿಧಾನ ಪರಿಷತ್ ಚುಣಾವಣೆ ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರ ಪ್ರಚಾರಾರ್ಥ ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ಗ್ರಾಮ ಪಂಚಾಯತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

ರಮೇಶ ಜಾರಕಿಹೊಳಿ ಅವರು ಚುಣಾವಣೆಗಾಗಿ ಮಾತ್ರ ಸೀಮಿತವಾದ ವ್ಯಕ್ತಿ ಹೊರತು ಜನಸಾಮಾನ್ಯರ ಕಷ್ಟಗಳಿಗೆ ಬಂದವರಲ್ಲ, ಈ ಹಿಂದೆ ನಡೆದ ವಿಧಾನ‌ಪರಿಷತ್  ಚುಣಾವಣೆಯಲ್ಲಿ ನಮ್ಮ‌ಎದುರಾಳಿ ಯಾರು ಎಂದು ಗೊತ್ತಿರದೆ ನಮ್ಮವರಿಂದಲೇ ನಾವು ಸೋತಿದ್ವಿ‌. ಆದರೆ ಈ ಚುಣಾವಣೆಯಲ್ಲಿ ನಮ್ಮ ಎದುರಾಳಿ ಸ್ಪಷ್ಟವಾಗಿ ಗೊತ್ತಿರುವುದರಿಂದ ಸಂಘಟನೆ ಮಾಡಿ ಗೆಲ್ಲಬೇಕಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಗೆದ್ದರೆ ನಾವು ಸ್ವತಂತ್ರವಾಗಿ ಪಕ್ಷ ಸಂಘಟನೆ ಮಾಡಲು ಸಾಧ್ಯ. ಜಿಲ್ಲೆಯ ಎಲ್ಲರೂ ಸೇರಿಕೊಂಡು ಅವರನ್ನು ಗೆಲ್ಲಿಸಿ ಈ ಹಿಂದೆ ಆದ ಮೋಸವನ್ನು ಮರೆಯಬೇಕಾಗಿದೆ. ಮತದಾರರು ಯಾವುದೇ ಆಮೀಷಕ್ಕೆ ಒಳಗಾಗದೆ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರಿಗೆ ಮತಹಾಕಿ ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು