1:18 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಬಿಜೆಪಿಯವರಿಗಿಂತ ಪಕ್ಷೇತರರ ಸ್ಪರ್ಧೆ ನಮಗೆ ಸಮಸ್ಯೆಯಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

26/11/2021, 11:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಧಾನ ಪರಿಷತ್ ಚುಣಾವಣೆಯಲ್ಲಿ ಬಿಜೆಪಿಗಿಂತ ನಮಗೆ ಪಕ್ಷೇತರ ಸಮಸ್ಯೆ ಬಹಳವಾಗಿದೆ. ಈ ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸುವುದರಿಂದ ಎರಡೂ ಪಕ್ಷದವರಿಗೆ ಗೊಂದಲವಾಗಿದೆ. ಇದರಿಂದ ಎರಡೂ ಪಕ್ಷದವರು‌ ವಿಶೇಷ ತಂತ್ರಗಳನ್ನು ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.

ಅವರು ಸ್ಥಳೀಯ ಆರ್.ಎಚ್. ಕುಲಕರ್ಣಿ ಸಭಾ ಭವನದಲ್ಲಿ ಹಮ್ಮಿಕೊಂಡ ವಿಧಾನ ಪರಿಷತ್ ಚುಣಾವಣೆ ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರ ಪ್ರಚಾರಾರ್ಥ ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ಗ್ರಾಮ ಪಂಚಾಯತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

ರಮೇಶ ಜಾರಕಿಹೊಳಿ ಅವರು ಚುಣಾವಣೆಗಾಗಿ ಮಾತ್ರ ಸೀಮಿತವಾದ ವ್ಯಕ್ತಿ ಹೊರತು ಜನಸಾಮಾನ್ಯರ ಕಷ್ಟಗಳಿಗೆ ಬಂದವರಲ್ಲ, ಈ ಹಿಂದೆ ನಡೆದ ವಿಧಾನ‌ಪರಿಷತ್  ಚುಣಾವಣೆಯಲ್ಲಿ ನಮ್ಮ‌ಎದುರಾಳಿ ಯಾರು ಎಂದು ಗೊತ್ತಿರದೆ ನಮ್ಮವರಿಂದಲೇ ನಾವು ಸೋತಿದ್ವಿ‌. ಆದರೆ ಈ ಚುಣಾವಣೆಯಲ್ಲಿ ನಮ್ಮ ಎದುರಾಳಿ ಸ್ಪಷ್ಟವಾಗಿ ಗೊತ್ತಿರುವುದರಿಂದ ಸಂಘಟನೆ ಮಾಡಿ ಗೆಲ್ಲಬೇಕಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಗೆದ್ದರೆ ನಾವು ಸ್ವತಂತ್ರವಾಗಿ ಪಕ್ಷ ಸಂಘಟನೆ ಮಾಡಲು ಸಾಧ್ಯ. ಜಿಲ್ಲೆಯ ಎಲ್ಲರೂ ಸೇರಿಕೊಂಡು ಅವರನ್ನು ಗೆಲ್ಲಿಸಿ ಈ ಹಿಂದೆ ಆದ ಮೋಸವನ್ನು ಮರೆಯಬೇಕಾಗಿದೆ. ಮತದಾರರು ಯಾವುದೇ ಆಮೀಷಕ್ಕೆ ಒಳಗಾಗದೆ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರಿಗೆ ಮತಹಾಕಿ ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು