12:54 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಯರಬಳ್ಳಿ ಗ್ರಾಮದ ಮಾರಮ್ಮದೇವಸ್ಥಾನಕ್ಕೆ ಭೂಮಿ ನೀಡಲು ಸಿಎಂಗೆ ಮನವಿ: ಜಾಗ ಮಂಜೂರಾತಿಗೆ ಜಿಲ್ಲಾಧಿಕಾರಿಗೆ ಆದೇಶ

26/11/2021, 12:06

ಬೆಂಗಳೂರು(reporterkarnataka.com) : ರಾಷ್ಟ್ರೀಯ ಹೆದ್ದಾರಿ 150 ಎ ವಿಸ್ತರಣೆಯಿಂದ ಯರಬಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನ ಸ್ಥಳಾಂತರಗೊಳ್ಳುತ್ತಿದ್ದು, ದೇವಸ್ಥಾನಕ್ಕೆ ಪರ್ಯಾಯ ಭೂಮಿ ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೋಮವಾರ ಭೇಟಿ ಮಾಡಿ ಒತ್ತಾಯಿಸಿದರು.

ದೇವಸ್ಥಾನಕ್ಕೆ ಎದುರುಗಡೆ ಇರುವ ಸರ್ಕಾರಿ ಭೂಮಿಯನ್ನು ನೀಡಬೇಕು ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಐಮಂಗಳ ಹೋಬಳಿಯ ಯರಬಳ್ಳಿ ಗ್ರಾಮದೇವತೆ ಮಾರಮ್ಮ ದೇವಸ್ಥಾನ ಟ್ರಸ್ಟ್ ಸದಸ್ಯರು ಮತ್ತು ಗ್ರಾಮಸ್ಥರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಕುರಿತು ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ಥಳದಲ್ಲೇ ಜಿಲ್ಲಾಧಿಕಾರಿಗೆ ಸರ್ಕಾರದ ಜಾಗವನ್ನು ಮಂಜೂರು ಮಾಡಲು ಆದೇಶಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳಾದ ಟಿ.ಜನಾರ್ಧನ್, ಚಿದಾನಂದಯ್ಯ, ಗಿರೀಶ್, ನಾಗರಾಜು, ಎಂ.ಮಂಜುನಾಥ್, ಒ.ಆರ್.ಮಂಜುನಾಥ್, ಚಕ್ರಪಾಣಿ, ಪ್ರಕಾಶ್, ಜಿ.ಸೋಮಶೇಖರಯ್ಯ, ವೀರನಾಯ್ಕ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು