6:30 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಯರಬಳ್ಳಿ ಗ್ರಾಮದ ಮಾರಮ್ಮದೇವಸ್ಥಾನಕ್ಕೆ ಭೂಮಿ ನೀಡಲು ಸಿಎಂಗೆ ಮನವಿ: ಜಾಗ ಮಂಜೂರಾತಿಗೆ ಜಿಲ್ಲಾಧಿಕಾರಿಗೆ ಆದೇಶ

26/11/2021, 12:06

ಬೆಂಗಳೂರು(reporterkarnataka.com) : ರಾಷ್ಟ್ರೀಯ ಹೆದ್ದಾರಿ 150 ಎ ವಿಸ್ತರಣೆಯಿಂದ ಯರಬಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನ ಸ್ಥಳಾಂತರಗೊಳ್ಳುತ್ತಿದ್ದು, ದೇವಸ್ಥಾನಕ್ಕೆ ಪರ್ಯಾಯ ಭೂಮಿ ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೋಮವಾರ ಭೇಟಿ ಮಾಡಿ ಒತ್ತಾಯಿಸಿದರು.

ದೇವಸ್ಥಾನಕ್ಕೆ ಎದುರುಗಡೆ ಇರುವ ಸರ್ಕಾರಿ ಭೂಮಿಯನ್ನು ನೀಡಬೇಕು ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಐಮಂಗಳ ಹೋಬಳಿಯ ಯರಬಳ್ಳಿ ಗ್ರಾಮದೇವತೆ ಮಾರಮ್ಮ ದೇವಸ್ಥಾನ ಟ್ರಸ್ಟ್ ಸದಸ್ಯರು ಮತ್ತು ಗ್ರಾಮಸ್ಥರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಕುರಿತು ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ಥಳದಲ್ಲೇ ಜಿಲ್ಲಾಧಿಕಾರಿಗೆ ಸರ್ಕಾರದ ಜಾಗವನ್ನು ಮಂಜೂರು ಮಾಡಲು ಆದೇಶಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳಾದ ಟಿ.ಜನಾರ್ಧನ್, ಚಿದಾನಂದಯ್ಯ, ಗಿರೀಶ್, ನಾಗರಾಜು, ಎಂ.ಮಂಜುನಾಥ್, ಒ.ಆರ್.ಮಂಜುನಾಥ್, ಚಕ್ರಪಾಣಿ, ಪ್ರಕಾಶ್, ಜಿ.ಸೋಮಶೇಖರಯ್ಯ, ವೀರನಾಯ್ಕ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು