5:55 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕುಟುಂಬದ ದೈವ, ದೇವರ ಆರಾಧನೆಯಿಂದ ಒಳಿತು: ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ 

26/11/2021, 18:27

ಮಂಗಳೂರು(reporterkarnataka.com) : ನಮ್ಮ ಕುಟುಂಬದ ದೈವ, ದೇವತಾರಾಧನೆ ಅಗತ್ಯವಾಗಿ ನಡೆಯಬೇಕಾಗಿದೆ. ನಮ್ಮ ಹಿರಿಯರು ಮಾಡಿಕೊಂಡು ಬಂದ ಸಂಪ್ರದಾಯ, ಕಟ್ಟುಕಟ್ಟಳೆಗಳನ್ನು ಪಾಲಿಸಿಕೊಂಡು ಬಂದಲ್ಲಿ ನಮಗೆ ಸುಖಃ ಸಮೃದ್ಧಿ ಸಿಗುತ್ತದೆ.  ಕುಟುಂಬದ ದೇವತಾಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಮೂಡುಬಿದಿರೆ ಕರಿಂಜೆ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ ಹೇಳಿದರು.

ಕೊಣಾಜೆ ಬೆಳ್ಮ ಅಡ್ಕರಮಜಲುವಿನ ಬೋಲ್ಡನ್‌ ಕುಟುಂಬಸ್ಥರ ತರವಾಡು ಮನೆಯಲ್ಲಿ ನೂತನವಾಗಿ ನಿರ್ಮಿಸಿದ ದೈವದ ಮನೆಯಲ್ಲಿ ಕಲ್ಲುರ್ಟಿ, ಪಂಜುರ್ಲಿ, ಗುಳಿಗ ಪ್ರತಿಷ್ಠಾಪನೆ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ನಾವು ಎಷ್ಟು ಪೂಜೆ, ಪುನಸ್ಕಾರ ಮಾಡುತ್ತೇವೆನ್ನುವುದು ಮುಖ್ಯ ಅಲ್ಲ. ಅಂತರಂಗ ಶುದ್ಧಿ ಇಟ್ಟುಕೊಂಡು ದೈವಸ್ಥಾನದ ಪ್ರವೇಶಿಸೋಣ. ನನ್ನ ಜೊತೆಗೆ ನನ್ನ ಕುಟುಂಬದವರಿಗೂ ಒಳ್ಳೆಯದಾಗಲಿ ಎನ್ನುವ ಒಳ್ಳೆಯ ಮನಸ್ಸಿನಿಂದ ಒಂದು ಹೂವಿನ ಎಸಲು ಇಟ್ಟರೂ ದೈವ ದೇವರು ಸಂತೃಪ್ತರಾಗುತ್ತಾರೆ. ನಾವೆಲ್ಲರೂ ಒಳ್ಳೆಯ ಮನಸ್ಸಿನಿಂದ ದೇವರ ಕಾರ್ಯದಲ್ಲಿ ಭಾಗಿಯಾಗಬೇಕು. ನಮ್ಮ ಮನಸ್ಸು, ನಾಲಗೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.


ದೈವದೇವರ ಕಾರ್ಯದಲ್ಲಿ ಯಾವುದೇ ಮನಕ್ಲೇಷಗಳನ್ನು ಇಟ್ಟುಕೊಂಡು ಪಾಲ್ಗೊಳ್ಳಬಾರದು.  ನಮ್ಮ ಜೀವನವನ್ನು ನೋಡಿ ಇನ್ನೊಬ್ಬರು ಕಲಿಯುವಂತಾಗಬೇಕು. ಸದಾ ಒಳ್ಳೆಯದನ್ನು ಮಾಡಬೇಕು. ಹೀಗಿದ್ದರೆ ಮಾತ್ರ ನಮ್ಮ ಬದುಕು ಸಾರ್ಥಕ. ಇಲ್ಲಿ ಜಗದೊಡೆಯ ದೇವರು. ಇಲ್ಲಿ ನಾನು ಎನ್ನುವುದನ್ನು ಬಿಟ್ಟು, ದೇವರು ನನ್ನಿಂದ ಈ ಸೇವೆ ಮಾಡಿಸಿದರು ಎನ್ನುವ ಸೇವೆಯನ್ನು ಮಾಡಿಸಿದರೇ ಅದೇ ಸಾರ್ಥಕ ಎಂದು ಹರಸಿದರು.



ನೂತನ ಮನೆಯಲ್ಲಿ ದೈವಗಳ ಪ್ರತಿಷ್ಠಾಪನೆ :  

ದೈವಗಳಿಗೆ ನಿರ್ಮಿಸಿದ ನೂತನ ದೈವದ ಗೃಹಪ್ರವೇಶವನ್ನು ಅಂಬ್ಲಮೊಗರು ಪ್ರಶಾಂತ್‌ ಉಡುಪ ದಿವ್ಯಹಸ್ತದಿಂದ ನೆರವೇರಿಸಲಾಯಿತು. ನಾಗದೇವರಿಗೆ ತಂಬಿಲ, ಅಶ್ಲೇಷ ಪೂಜೆ, ವಾಸ್ತು ಹೋಮ, ಅಘೋರ ಹೋಮ, ಸತ್ಯನಾರಾಯಣ ಪೂಜೆ, ವೆಂಕಟ್ರಮಣ ಪೂಜೆ, ಕಲ್ಲುರ್ಟಿ ಪಂಜುರ್ಲಿ ದೈವಗಳ ಕೋಲ, ಗುಳಿಗನಿಗೆ ಕೋಲೋತ್ಸವ ನಡೆಯಿತು. 



ವಾಸ್ತು ಶಿಲ್ಪಿ ಪ್ರಸನ್ನ ಮುಳಿಯಾಲು, ಗಣೇಶ್‌ ಭಟ್‌ ಮಿತ್ತೂರು, ಬೋಲ್ದನ್ ಕುಟುಂಬಸ್ಥರ ತರವಾಡು ಮನೆಯ ಹಿರಿಯರಾದ ಐತಪ್ಪ ಬೆಳ್ತಂಗಡಿ, ಮೋಹಿನಿ ಬೆಳ್ಮ, ಕಾರ್ಯಕಾರಿ ಸಮಿತಿ ಪ್ರಮುಖರು, ಕುಟುಂಬಸ್ಥರು, ಊರಿನ ಭಕ್ತಾದಿಗಳು, ಹಿಂದೂ ಸಮಾಜದ ಮುಖಂಡರು, ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು