7:41 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದೆ ತಾಲೂಕು ಆಡಳಿತ ನಿರ್ಲಕ್ಷ್ಯ: ದಲಿತ ಮುಖಂಡರ ಟೀಕೆ

27/11/2021, 08:58

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಸರ್ವರಿಗೂ ಸಮಾನತೆ ಒದಗಿಸಿ ಮೂಲಭೂತ ಹಕ್ಕುಗಳನ್ನು ನೀಡಿದ ಸಂವಿಧಾನ ರಚಿಸಿದ ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಆಡಳಿತ ಮಾಲಾರ್ಪಣೆ ಮಾಡದೆ ನಿರ್ಲವಹಿಸಿದೆ ಎಂದು ದಲಿತ ಮುಖಂಡರು ತಹಶೀಲ್ದಾರ್ ವಿರುದ್ದ ಕಿಡಿ ಕಾರಿದ್ದಾರೆ.

ಭಾರತ ಸಂವಿಧಾನ ದಿನವನ್ನು ಪ್ರತಿ ವರ್ಷ ನವೆಂಬರ್ 26 ರಂದು ಆಚರಣೆ ಮಾಡಲಾಗುತ್ತಿದ್ದು ತಾಲೂಕು ಕಚೇರಿ ಎದುರಲ್ಲೇ ಇರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲು ತಾಲೂಕು ಆಡಳಿತ ನಿರ್ಲಕ್ಷವಹಿಸಿದೆ ಎಂದು ದಲಿತ ಮುಖಡಂರು ಅಂಬೇಡ್ಕರ್ ಪ್ರತಿಮೆ ಮುಂದೆ ವಿರೋದ ವ್ಯಕ್ತಪಡಿಸಿದ್ದಾರೆ.

ದಲಿತ ಮುಖಂಡರು ವಿರೋಧ ವ್ಯಕ್ತಪಡಿಸಿದನಂತರ ಎಚ್ಚತ್ತ ತಾಲೂಕು ಆಡಳಿತ ಸಿಬ್ಬಂದಿಯನ್ನು ಕಳಿಸಿ ಸ್ವಚ್ಚತೆ ಮಾಡಲು ಮುಂದಾಗಿದ್ದಾರೆ. 

ಜಿಪಂ ಮಾಜಿ ಸದಸ್ಯ ಪ್ರಕಾಶ್ ಮಾತನಾಡಿ 1949 ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಸೆಲೆಬ್ರೇಟ್ ಮಾಡುತ್ತಿದ್ದೇವೆ.

ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949ರ ನವೆಂಬರ್ 26ರಂದೇ ಆದರೂ ಅನುಷ್ಠಾನಕ್ಕೆ  ತಂದಿದ್ದು 1950ರ ಜನವರಿ 26 ರಂದು. ಈ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ. ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ನಗರಸಭೆ ಉಪಾಧ್ಯಕ್ಷ ವಿಜಯ್‍ಕುಮಾರ್, ಎಸ್.ಎಚ್.ಸೈಯಾದ್, ಉಮೇಶ್ ಬ್ಯಾನರ್ಜಿ, ವಿನೋದ್ ಕುಮಾರ್,ಭದ್ರಿ, ಸಿ.ಶ್ರೀನಿವಾಸ್,ಡಿ.ಟಿ. ಭೂತಲಿಂಗಪ್ಪ, ಬೀಮಣ್ಣ, ನಾಗರಾಜ್, ಚಂದ್ರಪ್ಪ, ಅನಿಲ್ ಕುಮಾರ್,  ದಲಿತ  ಇತರರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು