8:34 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದೆ ತಾಲೂಕು ಆಡಳಿತ ನಿರ್ಲಕ್ಷ್ಯ: ದಲಿತ ಮುಖಂಡರ ಟೀಕೆ

27/11/2021, 08:58

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಸರ್ವರಿಗೂ ಸಮಾನತೆ ಒದಗಿಸಿ ಮೂಲಭೂತ ಹಕ್ಕುಗಳನ್ನು ನೀಡಿದ ಸಂವಿಧಾನ ರಚಿಸಿದ ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಆಡಳಿತ ಮಾಲಾರ್ಪಣೆ ಮಾಡದೆ ನಿರ್ಲವಹಿಸಿದೆ ಎಂದು ದಲಿತ ಮುಖಂಡರು ತಹಶೀಲ್ದಾರ್ ವಿರುದ್ದ ಕಿಡಿ ಕಾರಿದ್ದಾರೆ.

ಭಾರತ ಸಂವಿಧಾನ ದಿನವನ್ನು ಪ್ರತಿ ವರ್ಷ ನವೆಂಬರ್ 26 ರಂದು ಆಚರಣೆ ಮಾಡಲಾಗುತ್ತಿದ್ದು ತಾಲೂಕು ಕಚೇರಿ ಎದುರಲ್ಲೇ ಇರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲು ತಾಲೂಕು ಆಡಳಿತ ನಿರ್ಲಕ್ಷವಹಿಸಿದೆ ಎಂದು ದಲಿತ ಮುಖಡಂರು ಅಂಬೇಡ್ಕರ್ ಪ್ರತಿಮೆ ಮುಂದೆ ವಿರೋದ ವ್ಯಕ್ತಪಡಿಸಿದ್ದಾರೆ.

ದಲಿತ ಮುಖಂಡರು ವಿರೋಧ ವ್ಯಕ್ತಪಡಿಸಿದನಂತರ ಎಚ್ಚತ್ತ ತಾಲೂಕು ಆಡಳಿತ ಸಿಬ್ಬಂದಿಯನ್ನು ಕಳಿಸಿ ಸ್ವಚ್ಚತೆ ಮಾಡಲು ಮುಂದಾಗಿದ್ದಾರೆ. 

ಜಿಪಂ ಮಾಜಿ ಸದಸ್ಯ ಪ್ರಕಾಶ್ ಮಾತನಾಡಿ 1949 ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಸೆಲೆಬ್ರೇಟ್ ಮಾಡುತ್ತಿದ್ದೇವೆ.

ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949ರ ನವೆಂಬರ್ 26ರಂದೇ ಆದರೂ ಅನುಷ್ಠಾನಕ್ಕೆ  ತಂದಿದ್ದು 1950ರ ಜನವರಿ 26 ರಂದು. ಈ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ. ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ನಗರಸಭೆ ಉಪಾಧ್ಯಕ್ಷ ವಿಜಯ್‍ಕುಮಾರ್, ಎಸ್.ಎಚ್.ಸೈಯಾದ್, ಉಮೇಶ್ ಬ್ಯಾನರ್ಜಿ, ವಿನೋದ್ ಕುಮಾರ್,ಭದ್ರಿ, ಸಿ.ಶ್ರೀನಿವಾಸ್,ಡಿ.ಟಿ. ಭೂತಲಿಂಗಪ್ಪ, ಬೀಮಣ್ಣ, ನಾಗರಾಜ್, ಚಂದ್ರಪ್ಪ, ಅನಿಲ್ ಕುಮಾರ್,  ದಲಿತ  ಇತರರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು