3:40 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಎತ್ತಿನಭುಜ: ಮೀಸಲು ಅರಣ್ಯದಲ್ಲಿ  ಮ್ಯಾರಥಾನ್ ಗೆ ಪರಿಸರಪ್ರಿಯರ ವಿರೋಧ

27/11/2021, 09:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

The Malnad Ultra ಎಂಬ ಸಂಸ್ಥೆಯು ಮೂಡಿಗೆರೆಯ ಎತ್ತಿನಭುಜ ಗುಡ್ಡದ ವ್ಯಾಪ್ತಿಯಲ್ಲಿ ಇಂದಿನಿಂದ ಮ್ಯಾರಥಾನ್ ಅನ್ನು ಆಯೋಜಿಸಿದೆ. 


ಆದರೆ ಈ ಮ್ಯಾರಥಾನ್ ಪಶ್ಚಿಮಘಟ್ಟ ಮೀಸಲು ಅರಣ್ಯದಲ್ಲಿ ಹಾದು ಹೋಗುವುದರಿಂದ ಪರಿಸರ ಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವ ಉದ್ದೇಶಕ್ಕೆ, ಯಾರ ಉದ್ಧಾರಕ್ಕೆ  ಮಾಹಿತಿಯಂತೆ 500 ಜನರ ಭಾಗವಹಿಸಲಿರುವ  ಮ್ಯಾರಥಾನ್ ಇದು. ಇಷ್ಟೊಂದು ಜನ ಒಟ್ಟಿಗೇ ಚಟುವಟಿಕೆ ಪ್ರಾರಂಭಿಸಿದರೆ ಪರಿಸರ ಸೂಕ್ಷ್ಮ ಪ್ರದೇಶದ ಗತಿಯೇನು !? ಇವರ ಶೌಚ ಕ್ರಿಯೆಯಿಂದಾಗಿ ಅಲ್ಲಿನ ಜಲಮೂಲಗಳು ಕುಲಗೆಟ್ಟು ಹೋಗುವುದಕ್ಕೆ ಯಾರು ಹೊಣೆ ? ಜಿಲ್ಲಾಡಡಳಿತ, ಅರಣ್ಯ ಇಲಾಖೆ ಹೇಗೆ ಇಂತಹ Mega Event ಗೆ ಅನುಮತಿ ನೀಡಿತು.? ನಮ್ಮ ಪ್ರಶ್ನೆಗಳಿಗೆ ಜಿಲ್ಲಾ ಉಪಸಂರಕ್ಷಣಾಧಿಕಾರಿಗಳು ಬರೀ ಹಾರಿಕೆಯ ಉತ್ತರವನ್ನಷ್ಟೇ ನೀಡುತ್ತಿದ್ದಾರೆ. 


ಈ ಮ್ಯಾರಥಾನ್ ನ  ಸಂಚಾಲಕರೇ ಮಾಹಿತಿ ನೀಡಿರುವಂತೆ ಮ್ಯಾರಥಾನ್ ನಲ್ಲಿ ಭಾಗವಹಿಸುವವರಿಗೆ ತಲಾ 3000-3500 ರುಪಾಯಿ  ನಿಗದಿಪಡಿಸಲಾಗಿದೆ. 3000*400 ಜನ ಎಂದುಕೊಂಡರೂ 12 ಲಕ್ಷವಾಯಿತು. ಯಾವುದೋ ಖಾಸಗಿ ಈವೆಂಟ್ ಸಂಸ್ಥೆಗೆ ಲಾಭ ಮಾಡಿಕೊಳ್ಳುವ ಸಲುವಾಗಿ ಜಿಲ್ಲಾಡಳಿತ ಪಶ್ಚಿಮಘಟ್ಟ ವನ್ನು ಧಾರೆಯೆರೆಯಿತಾ ? ಎಂಬ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ

ಇತ್ತೀಚಿನ ಸುದ್ದಿ

ಜಾಹೀರಾತು