7:42 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೊರೊನಾ ಭೀತಿ: ವ್ಯಾಕ್ಸಿನ್  ಪಡೆಯಲು ಸಾರ್ವಜನಿಕರಿಂದ ನೂಕುನುಗ್ಗಲು; ಹಲವರಿಗೆ ನಿರಾಸೆ

31/05/2021, 15:06

ಡಿ.ಆರ್. ಜಗದೀಶ್ ದೇವಲಾಪುರ ನಾಗಮಂಗಲ
info.reporterkarnataka@gmail.com

ನಾಗಮಂಗಲ ಪಟ್ಟಣದ ಜೂನಿಯರ್ ಕಾಲೇಜಿನ ಅವರಣದಲ್ಲಿ ಪುರಸಭೆಯ ವತಿಯಿಂದ  ಪಟ್ಟಣದ ಅನುಮೋದಿತ ಬೀದಿ ಬದಿ ವ್ಯಾಪಾರಿಗಳಿಗೆ   ಕೋವಿಡ್ 19 ಲಸಿಕೆ ಪಡೆಯುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಕ್ಸಿನ್ ಪಡೆಯಲು ನೂಕುನುಗ್ಗಲು ಉಂಟಾಯಿತು.

ಕಳೆದ ಎರಡು ದಿನಗಳಿಂದ ನಾಲ್ಕು ನೂರಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಲಸಿಕೆಯನ್ನು ಹಾಕಲಾಗಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಹ ಪಾಲ್ಗೊಂಡು ವ್ಯಾಕ್ಸಿನ್ ಪಡೆಯುತ್ತಿದ್ದರು. ಆದರೆ ವ್ಯಾಕ್ಸಿನ್ ಕೊರತೆಯಿಂದ ಇಂದು ವ್ಯಾಕ್ಸಿನ್ ಪಡೆಯಲು ಬಂದಿದ್ದ ಸಾರ್ವಜನಿಕರಿಗೆ ನಿರಾಸೆಯಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಟಿ ಹೆಚ್ ಪ್ರಸನ್ನರವರು ಸಾವ೯ಜನಿಕರನ್ನು ಕುರಿತು ಮಾತನಾಡುತ್ತಾ ಈಗ ವ್ಯಾಕ್ಸಿನ್ ಗಳ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಹೆಚ್ಚು ವ್ಯಾಕ್ಸಿನ್ ಪೂರೈಕೆಯಾಗಲಿದ್ದು ಆಗ ಸಾರ್ವಜನಿಕರು ಒಂದು ವ್ಯಾಕ್ಸಿನ ಪಡೆಯಬಹುದು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಚನ್ನಪ್ಪ ಹಾಗೂ ಆರೋಗ್ಯ ನೀರಿಕ್ಷಕರಾದ ಮಾರ್ತಿ,  ಸಿಬ್ಬಂದಿಗಳಾದ ನಾಗರಾಜು ಮೋಹನ್ ಆರೋಗ್ಯ ಸಹಾಯಕಿ ಪ್ರಮೀಳಾ ಹಾಗೂ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು