11:32 PM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಕೊರೊನಾ ಭೀತಿ: ವ್ಯಾಕ್ಸಿನ್  ಪಡೆಯಲು ಸಾರ್ವಜನಿಕರಿಂದ ನೂಕುನುಗ್ಗಲು; ಹಲವರಿಗೆ ನಿರಾಸೆ

31/05/2021, 15:06

ಡಿ.ಆರ್. ಜಗದೀಶ್ ದೇವಲಾಪುರ ನಾಗಮಂಗಲ
info.reporterkarnataka@gmail.com

ನಾಗಮಂಗಲ ಪಟ್ಟಣದ ಜೂನಿಯರ್ ಕಾಲೇಜಿನ ಅವರಣದಲ್ಲಿ ಪುರಸಭೆಯ ವತಿಯಿಂದ  ಪಟ್ಟಣದ ಅನುಮೋದಿತ ಬೀದಿ ಬದಿ ವ್ಯಾಪಾರಿಗಳಿಗೆ   ಕೋವಿಡ್ 19 ಲಸಿಕೆ ಪಡೆಯುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಕ್ಸಿನ್ ಪಡೆಯಲು ನೂಕುನುಗ್ಗಲು ಉಂಟಾಯಿತು.

ಕಳೆದ ಎರಡು ದಿನಗಳಿಂದ ನಾಲ್ಕು ನೂರಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಲಸಿಕೆಯನ್ನು ಹಾಕಲಾಗಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಹ ಪಾಲ್ಗೊಂಡು ವ್ಯಾಕ್ಸಿನ್ ಪಡೆಯುತ್ತಿದ್ದರು. ಆದರೆ ವ್ಯಾಕ್ಸಿನ್ ಕೊರತೆಯಿಂದ ಇಂದು ವ್ಯಾಕ್ಸಿನ್ ಪಡೆಯಲು ಬಂದಿದ್ದ ಸಾರ್ವಜನಿಕರಿಗೆ ನಿರಾಸೆಯಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಟಿ ಹೆಚ್ ಪ್ರಸನ್ನರವರು ಸಾವ೯ಜನಿಕರನ್ನು ಕುರಿತು ಮಾತನಾಡುತ್ತಾ ಈಗ ವ್ಯಾಕ್ಸಿನ್ ಗಳ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಹೆಚ್ಚು ವ್ಯಾಕ್ಸಿನ್ ಪೂರೈಕೆಯಾಗಲಿದ್ದು ಆಗ ಸಾರ್ವಜನಿಕರು ಒಂದು ವ್ಯಾಕ್ಸಿನ ಪಡೆಯಬಹುದು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಚನ್ನಪ್ಪ ಹಾಗೂ ಆರೋಗ್ಯ ನೀರಿಕ್ಷಕರಾದ ಮಾರ್ತಿ,  ಸಿಬ್ಬಂದಿಗಳಾದ ನಾಗರಾಜು ಮೋಹನ್ ಆರೋಗ್ಯ ಸಹಾಯಕಿ ಪ್ರಮೀಳಾ ಹಾಗೂ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು