12:24 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕೊರೊನಾ ಭೀತಿ: ವ್ಯಾಕ್ಸಿನ್  ಪಡೆಯಲು ಸಾರ್ವಜನಿಕರಿಂದ ನೂಕುನುಗ್ಗಲು; ಹಲವರಿಗೆ ನಿರಾಸೆ

31/05/2021, 15:06

ಡಿ.ಆರ್. ಜಗದೀಶ್ ದೇವಲಾಪುರ ನಾಗಮಂಗಲ
info.reporterkarnataka@gmail.com

ನಾಗಮಂಗಲ ಪಟ್ಟಣದ ಜೂನಿಯರ್ ಕಾಲೇಜಿನ ಅವರಣದಲ್ಲಿ ಪುರಸಭೆಯ ವತಿಯಿಂದ  ಪಟ್ಟಣದ ಅನುಮೋದಿತ ಬೀದಿ ಬದಿ ವ್ಯಾಪಾರಿಗಳಿಗೆ   ಕೋವಿಡ್ 19 ಲಸಿಕೆ ಪಡೆಯುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಕ್ಸಿನ್ ಪಡೆಯಲು ನೂಕುನುಗ್ಗಲು ಉಂಟಾಯಿತು.

ಕಳೆದ ಎರಡು ದಿನಗಳಿಂದ ನಾಲ್ಕು ನೂರಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಲಸಿಕೆಯನ್ನು ಹಾಕಲಾಗಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಹ ಪಾಲ್ಗೊಂಡು ವ್ಯಾಕ್ಸಿನ್ ಪಡೆಯುತ್ತಿದ್ದರು. ಆದರೆ ವ್ಯಾಕ್ಸಿನ್ ಕೊರತೆಯಿಂದ ಇಂದು ವ್ಯಾಕ್ಸಿನ್ ಪಡೆಯಲು ಬಂದಿದ್ದ ಸಾರ್ವಜನಿಕರಿಗೆ ನಿರಾಸೆಯಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಟಿ ಹೆಚ್ ಪ್ರಸನ್ನರವರು ಸಾವ೯ಜನಿಕರನ್ನು ಕುರಿತು ಮಾತನಾಡುತ್ತಾ ಈಗ ವ್ಯಾಕ್ಸಿನ್ ಗಳ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಹೆಚ್ಚು ವ್ಯಾಕ್ಸಿನ್ ಪೂರೈಕೆಯಾಗಲಿದ್ದು ಆಗ ಸಾರ್ವಜನಿಕರು ಒಂದು ವ್ಯಾಕ್ಸಿನ ಪಡೆಯಬಹುದು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಚನ್ನಪ್ಪ ಹಾಗೂ ಆರೋಗ್ಯ ನೀರಿಕ್ಷಕರಾದ ಮಾರ್ತಿ,  ಸಿಬ್ಬಂದಿಗಳಾದ ನಾಗರಾಜು ಮೋಹನ್ ಆರೋಗ್ಯ ಸಹಾಯಕಿ ಪ್ರಮೀಳಾ ಹಾಗೂ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು