12:17 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಜಗತ್ತಿನ ನಿದ್ದೆಗೆಡಿಸಿದ ಹೊಸ ರೂಪಾಂತರಿತ ‘ಓಮಿಕ್ರಾನ್’ : ಇದರ ಸಂಪೂರ್ಣ ಮಾಹಿತಿ ಇಲ್ಲಿದೆ!

27/11/2021, 22:05

ಕೇಪ್ಟೌನ್(reporterkarnataka.com) : ಇಡೀ ಜಗತ್ತಿನಲ್ಲಿ ಕೊರೊನಾ ಭೀತಿ ಕಡಿಮೆಯಾಯಿತು ಎನ್ನುವಷ್ಟರಲ್ಲಿ ಹೊಸ ವೈರಸ್ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಗೆ ಓಮಿಕ್ರಾನ್’ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಸಿಂಗಾಪುರ ಹೇಳಿದೆ.

ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮಿಕ್ರಾನ್ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.

ದಕ್ಷಿಣ ಅಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಾಣುವಿನ ಹೊಸ ತಳಿಯ ವಿರುದ್ಧ ಕೋವಿಡ್‌-19 ತಡೆ ಲಸಿಕೆಗಳು ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಇದೆ. ಈ ತಳಿಯ ವೈರಾಣು ಆಫ್ರಿಕಾ ಖಂಡದಿಂದಾಚೆಗೆ ಈಗಾಗಲೇ ಹರಡಿರುವ ಅಪಾಯವಿದೆ. ಇದನ್ನು ನಿಯಂತ್ರಿಸದೇ ಇದ್ದರೆ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇದೆ’ ಎಂದು ಬ್ರಿಟನ್‌ನ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಇಸ್ರೇಲ್‌, ಬೆಲ್ಜಿಯಂ ಮತ್ತು ಹಾಂಗ್‌ಕಾಂಗ್‌ನಲ್ಲಿ ಈ ತಳಿಯ ವೈರಾಣು ತಗುಲಿರುವ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ

ಈ ತಳಿಯ ವೈರಾಣು ಪತ್ತೆಯಾಗಿರುವ ಆಫ್ರಿಕಾದ ಆರು ರಾಷ್ಟ್ರಗಳಿಂದ ವಿಮಾನ ಸಂಚಾರವನ್ನು ಹಲವು ದೇಶಗಳು ನಿಷೇಧಿಸಿವೆ. ಬ್ರಿಟನ್, ಜರ್ಮನಿ ಮತ್ತು ಇಟಲಿ ಈ ದೇಶಗಳಿಗೆ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ. ನಂತರ, ಮಲೇಷ್ಯಾ, ಸಿಂಗಪುರ, ಇಸ್ರೇಲ್ ಇದನ್ನೇ ಅನುಸರಿಸಿದವು. ಆನಂತರ ಐರೋಪ್ಯ ಒಕ್ಕೂಟವೂ ಈ ದೇಶಗಳಿಗೆ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು