6:42 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2 ದಿನ ಪೊಲೀಸ್ ಕಸ್ಟಡಿಗೆ

27/11/2021, 22:46

ಮಂಗಳೂರು(reporterkarnataka.com): ಆರೋಗ್ಯ ಇಲಾಖೆಯ 9 ಮಂದಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕುಷ್ಠ ರೋಗ ವಿಭಾಗದ ಅಧಿಕಾರಿಯಾದ ಡಾ. ರತ್ನಾಕರ್‌ ನನ್ನು ಬಂಧಿಸಲಾಗಿದ್ದು, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಮಾಧ್ಯಮಗಳಲ್ಲಿ ಶುಕ್ರವಾರ ಡಾ. ರತ್ನಾಕರನ ರಾಸಲೀಲೆ ವೀಡಿಯೊ ಹಾಗೂ ಫೋಟೋಗಳು ಬಹಿರಂಗಗೊಳ್ಳುತ್ತಿದ್ದಂತೆ ಆರೋಪಿಯನ್ನು ಪಾಂಡೇಶ್ವರ ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಈತನ ವಿರುದ್ಧ ನಾಲ್ವರು ಮಹಿಳೆಯರು ಠಾಣೆಗೆ ಬಂದು ದೂರು ನೀಡಿದ್ದಾರೆ. ಇವರಲ್ಲಿ ಮೂವರು ಸಂತ್ರಸ್ತೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ರತ್ನಾಕರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಯನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. 

ಈಗಾಗಲೇ ಸೋರಿಕೆಯಾಗಿರುವ ವೀಡಿಯೋದಲ್ಲಿರುವಂತೆ ಆರೋಪಿಯು ಸಂತ್ರಸ್ತ ಮಹಿಳೆಯರನ್ನು ಕುಂದಾಪುರ, ಮುರ್ಡೇಶ್ವರ, ಮಡಿಕೇರಿ, ಪಿರಿಯಾಪಟ್ಟಣಕ್ಕೆ ಕರೆದೊಯ್ದಿರುವುದು ಕಂಡು ಬಂದಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ರತ್ನಾಕರ್ ಚೆಲ್ಲಾಟ ನಡೆಸಿದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಹಿಳಾ ಸಂಘಟನೆ ಕಾರ್ಯಕರ್ತೆಯೊಬ್ಬರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಆರೋಪಿ ರತ್ನಾಕರನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇನ್‌ಸ್ಪೆಕ್ಟರ್ ರೇವತಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಯ ಮೊಬೈಲ್ ಫೋನ್‌ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು