12:33 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2 ದಿನ ಪೊಲೀಸ್ ಕಸ್ಟಡಿಗೆ

27/11/2021, 22:46

ಮಂಗಳೂರು(reporterkarnataka.com): ಆರೋಗ್ಯ ಇಲಾಖೆಯ 9 ಮಂದಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕುಷ್ಠ ರೋಗ ವಿಭಾಗದ ಅಧಿಕಾರಿಯಾದ ಡಾ. ರತ್ನಾಕರ್‌ ನನ್ನು ಬಂಧಿಸಲಾಗಿದ್ದು, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಮಾಧ್ಯಮಗಳಲ್ಲಿ ಶುಕ್ರವಾರ ಡಾ. ರತ್ನಾಕರನ ರಾಸಲೀಲೆ ವೀಡಿಯೊ ಹಾಗೂ ಫೋಟೋಗಳು ಬಹಿರಂಗಗೊಳ್ಳುತ್ತಿದ್ದಂತೆ ಆರೋಪಿಯನ್ನು ಪಾಂಡೇಶ್ವರ ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಈತನ ವಿರುದ್ಧ ನಾಲ್ವರು ಮಹಿಳೆಯರು ಠಾಣೆಗೆ ಬಂದು ದೂರು ನೀಡಿದ್ದಾರೆ. ಇವರಲ್ಲಿ ಮೂವರು ಸಂತ್ರಸ್ತೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ರತ್ನಾಕರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಯನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. 

ಈಗಾಗಲೇ ಸೋರಿಕೆಯಾಗಿರುವ ವೀಡಿಯೋದಲ್ಲಿರುವಂತೆ ಆರೋಪಿಯು ಸಂತ್ರಸ್ತ ಮಹಿಳೆಯರನ್ನು ಕುಂದಾಪುರ, ಮುರ್ಡೇಶ್ವರ, ಮಡಿಕೇರಿ, ಪಿರಿಯಾಪಟ್ಟಣಕ್ಕೆ ಕರೆದೊಯ್ದಿರುವುದು ಕಂಡು ಬಂದಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ರತ್ನಾಕರ್ ಚೆಲ್ಲಾಟ ನಡೆಸಿದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಹಿಳಾ ಸಂಘಟನೆ ಕಾರ್ಯಕರ್ತೆಯೊಬ್ಬರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಆರೋಪಿ ರತ್ನಾಕರನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇನ್‌ಸ್ಪೆಕ್ಟರ್ ರೇವತಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಯ ಮೊಬೈಲ್ ಫೋನ್‌ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು