8:30 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬೆಳೆ ನಷ್ಟ: ರೈತರನ್ನು ಕಚೇರಿಗೆ ಅಲೆದಾಡಿಸದೆ ತಂತ್ರಾಂಶದಲ್ಲಿ ವರದಿ ಅಳವಡಿಸುವಂತೆ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ

28/11/2021, 09:43

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ರೈತರನ್ನು ಕಚೇರಿಗೆ ಅಲೆದಾಡಿಸದೆ ಹಾಗೂ ಬೆಳೆ ನಷ್ಟ ಪರಿಹಾರ ಅರ್ಜಿಗಳನ್ನು ಸ್ವೀಕರಿಸದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವರದಿಯನ್ನು ಡಿ. 29ರ ಒಳಗೆ ತಂತ್ರಾಂಶದಲ್ಲಿ ಅಳವಡಿಸುವಂತೆ ತಹಶಿಲ್ದಾರ್ ಎನ್.ರಘುಮೂರ್ತಿ ತಾಕೀತು ಮಾಡಿದರು.

ನಗರದ ತಾಲೂಕು ಕಚೇರಿಯಲ್ಲಿ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಅಧಿಕಾರಿಗಳಿಗೆ ಆಯೋಜಿಸಿದ್ದ ಬೆಳೆ ನಷ್ಟ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕಳೆದ 15 ದಿನಗಳಿಂದ ವಾಯುಭಾರ ಕುಸಿತದಿಂದ ಸುರಿದ ಅಕಾಲಿಕ ಮಳೆಗೆ ತಾಲೂಕಿನಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಶೇಂಗಾ, 1200 ಹೆಕ್ಟೇರ್ ಕಡಲೆ, 8900 ಹೆಕ್ಟೇರ್ ಈರುಳ್ಳಿ, 770 ಹೆಕ್ಟೇರ್ ದಾಳಿಂಬೆ ಪಪ್ಪಾಯಿ ಬೆಳೆ ನಷ್ಟವಾಗಿದ್ದು. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರೈತರು ಈಗಾಲೆ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದು ಅನಾವಶ್ಯಕವಾಗಿ ಅರ್ಜಿಗಳನ್ನು ಪಡೆಯುವುದು , ಕಚೇರಿಗೆ ಅಲೆದಾಡಿಸದೆ ಈಗಾಗಲೆ  ನಷ್ಟವಾದ ವರದಿಯನ್ನು ಶನಿವಾರ, ಭಾನುವಾರ ರಜೆ ದಿನಗಳನ್ನು ಲೆಕ್ಕಿಸದೆ ಕಚೇರಿಯಲ್ಲಿ ಕುಳಿತು ಬೆಳೆ ಪರಿಯಾರ ತಂತ್ರಾಂಶದಲ್ಲಿ ರೈತರ ಬ್ಯಾಂಕ್ ಖಾತೆ ಸೇರಿದಂತೆ ಎಲ್ಲಾ ಮಾಹಿತಿ ಇದ್ದು ಅದನ್ನು ತಂತ್ರಾಂಶದಲ್ಲಿ ಅಳವಿಡಿಸಿ ರೈತರ ಖಾತೆಗೆ ನೇರವಾಗಿ ಬೆಳೆ ಪರಿಹಾರದ ಹಣ ಜಮ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ  ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್, ತೋಟಗಾರಿಕೆ ಸಹಾಯಕ ನಿರ್ದೇಶಕ ಡಾ.ವಿರುಪಾಕ್ಷಪ್ಪ, ಕಂದಾಯ ನಿರೀಕ್ಷಕ ಲಿಂಗೇಗೌಡ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು