12:34 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಯಲ್ಲಿ ಮಹಾವೀರ ಕಾಲೇಜಿನ ಎನ್ ಸಿ ಸಿ ಘಟಕದಿಂದ ಎನ್ ಸಿ ಸಿ ದಿನಾಚರಣೆ

29/11/2021, 15:53

ಮೂಡಬಿದಿರೆ(reporterkarnataka.com):  ಮಹಾವೀರ ಕಾಲೇಜಿನ ಎನ್ ಸಿ ಸಿ ಘಟಕದಿಂದ ಎನ್ ಸಿ ಸಿ ದಿನಾಚರಣೆಯನ್ನು ವೇಣೂರಿನ ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು. 

ನವೆಂಬರ್ ತಿಂಗಳ 4ನೇ ಭಾನುವಾರವನ್ನು ಎನ್ ಸಿ ಸಿ ದಿನವನ್ನಾಗಿ ಪ್ರತಿವರ್ಷವೂ ಆಚರಿಸಲಾಗುತ್ತಿದ್ದು, 73ನೇ ವರ್ಷದ ಎನ್ ಸಿ ಸಿ ದಿನಾಚರಣೆಯನ್ನು ಈ ವರ್ಷ ನವೆಂಬರ್ 28ರಂದು ದೇಶದಲ್ಲೆಲ್ಲೆಡೆ ಆಚರಿಸಲಾಗುತ್ತಿದೆ. ಆ ಪ್ರಯುಕ್ತ ಆಚರಿಸಲಾಯಿತು.


ಕಾಲೇಜಿನ ಪ್ರಾಂಶುಪಾಲ್ ಡಾ ರಾಧಾಕೃಷ್ಣ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವನ್ನು ಕ್ರಿಸ್ತರಾಜ ನವಚೇತನ ವಿಶೇಷ ಮಕ್ಕಳ ಶಾಲೆಗೆ ದಿನಬಳಕೆಯ ವಸ್ತುಗಳನ್ನು ನೀಡುವ ಮುಖಾಂತರ ಹಾಗೂ ಶಾಲೆಯಲ್ಲಿ ಎನ್ ಸಿ ಸಿ ಕೆಡೆಟ್ ಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡುವ ಮೂಲಕ ಎನ್ ಸಿ ಸಿ ದಿನಾಚರಣೆಯನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಕ್ರಿಸ್ತರಾಜ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಶಲೆಟ್ ಸ್ವಾಗತಿಸಿ ಶಾಲೆಯ ಶಿಕ್ಷಕಿ ಶಾಂತ ಮಾರ್ಟಿಸ್ ವಂದಿಸಿದರು. ಕೆಡೆಟ್ ಪ್ರಣಮ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್ ಸಿ ಸಿ ಘಟಕದ ಅಧಿಕಾರಿ ಶಿವಪ್ರಸಾದ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು