12:33 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ ಎಣ್ಣೆ ಮುಟ್ಟಿಲ್ಲ!!

29/11/2021, 18:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಲ್ಕು ಬಾರ್ ಗಳ ಬೀಗ ಹೊಡೆದು ಕಳ್ಳತನಕ್ಕೆ ಯತ್ನಿಸಿರೋ ಕಳ್ಳರು ಹಣ ಸಿಗದಿದ್ದಾಗಲೂ ಎಣ್ಣೆ ಮುಟ್ಟದೆ ಹಣ ಸಿಗಲಿಲ್ಲವೆಂದು ಪ್ರಾಮಾಣಿಕ ಬರೀಗೈಲಿ ವಾಪಸ್ ಹೋದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. 

ಬೆಳಗಿನ ಜಾವ 3 ಗಂಟೆ ಸುಮಾರಿಗೆ ತಾಲೂಕಿನ ಮೂಡಿಗೆರೆ ಪಟ್ಟಣದ ಚಂದನ್ ಬಾರ್, ಬಣಕಲ್ ಗ್ರಾಮದ ಸಂಭ್ರಮ್ ಬಾರ್ ಸೇರಿದಂತೆ ಗೋಣಿಬೀಡು ಹಾಗೂ ಚೀಕನಹಳ್ಳಿಯಲ್ಲಿ ಕಳ್ಳರು ನಾಲ್ಕು ಬಾರ್ ಗಳ ಬೀಗ ಹೊಡೆದು ಕಳ್ಳತನಕ್ಕೆ ಯತ್ನಿದ್ದರು. ಆದರೆ, ಕಳ್ಳರಿಗೆ ನಾಲ್ಕು ಬಾರ್ ನಲ್ಲೂ ಹಣ ಸಿಗಲಿಲ್ಲ. ಹಣ ಸಿಗದಿದ್ದಾಗ ಕಳ್ಳರು ಮದ್ಯವನ್ನ ಮುಟ್ಟದೆ ವಾಪಸ್ಸಾಗಿದ್ದಾರೆ. ಇದನ್ನ ಕಂಡ ಸ್ಥಳಿಯರು ಈ ಕಳ್ಳರು ಎಣ್ಣೆ ಹೊಡೆಯುವುದಿಲ್ಲ, ಇವ್ರು ಹಣದ ಕಳ್ಳರು ಅನ್ಸತ್ತೆ ಎಂದು ಕಾಮಿಡಿ ಮಾಡಿದ್ದಾರೆ. ಬಾರ್ ಗಳ ಅಕ್ಕಪಕ್ಕದ ಅಂಗಡಿಗಳಲ್ಲಿನ ಸಿಸಿಟಿವಿ ಫುಟೇಜ್ ನಲ್ಲಿ ಕಳ್ಳರ ಕೈಚಳಕ ಸೆರೆಯಾಗಿದೆ. ಎಲ್ಲರೂ ಮುಖಕ್ಕೆ ಮಂಕಿ ಕ್ಯಾಪ್ ಹಾಕಿಕೊಂಡು ಬಂದಿದ್ದರು ಎಂಬುದು ಖಾತ್ರಿಯಾಗಿದೆ. ಮೂಡಿಗೆರೆ, ಬಣಕಲ್ ಹಾಗೂ ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕೊರೋನಾ ಎರಡನೇ ಹಂತದ ಲಾಕ್ ಟೈಂನಲ್ಲಿ ಚಿಕ್ಕಮಗಳೂರು ನಗರದ ಬಾರ್ ಗೆ ಕಳ್ಳರು ಕನ್ನ ಹಾಕಿದ್ದರು. ಈ ವೇಳೆ ಕಳ್ಳರು ಹಣ ಹಾಗೂ ಕಾಸ್ಟ್ಲಿ ಎಣ್ಣೆ ಮುಟ್ಟಿರಲಿಲ್ಲ. ಲೋಕಲ್ ಬ್ರ್ಯಾಂಡ್ ಬಿಟ್ಟಿರಲಿಲ್ಲ. ಆದರೆ, ಈಗ ಮೂಡಿಗೆರೆಯಲ್ಲಿ ಬಾರ್ ಬೀಗ ಹೊಡೆದಿರೋ ಚೋರರು ಹಣ ಸಿಗದಿದ್ದಾಗ ಎಣ್ಣೆಯನ್ನೂ ಮುಟ್ಟದೆ ವಾಪಸ್ಸಾಗಿರೋದು ಸ್ಥಳೀಯಲ್ಲಿ ಆಶ್ಚರ್ಯ ಮೂಡಿಸಿದೆ. ಪ್ರಕರಣ ದಾಖಲಿಸಿಕೊಂಡಿರೋ ಮೂಡಿಗೆರೆ ಪೊಲೀಸರು ಪ್ರಾಮಾಣಿಕ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು