1:52 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್ ಆದೇಶದಂತೆ ಆರೋಪಿ ಬಂಧನ

29/11/2021, 19:14

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ವೃತ್ತಿಯಲ್ಲಿರುವ ಉಡುಪಿ ಮೂಲದ ದಂಪತಿ ವಾರಾಂತ್ಯದಲ್ಲಿ ತಮ್ಮ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದಾಗ, ಸುರತ್ಕಲ್ ಮುಕ್ಕದಲ್ಲಿ ಕಾನೂನುಬಾಹಿರವಾಗಿ ಕಾರ್ಯಾಚರಿಸುತ್ತಿರುವ ಅನಧಿಕೃತ ಟೋಲ್ ಗೇಟ್ ನಲ್ಲಿ ಸಿಬ್ಬಂದಿಯೋರ್ವ ತೀರಾ ಅನುಚಿತ ವರ್ತನೆ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೋಲ್ ಸಿಬ್ಬಂದಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. 

ನವೆಂಬರ್ 27ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ನಡೆದ ವೇಳೆ ಸಹಾಯಕ್ಕಾಗಿ ದಂಪತಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದರು. ಆ ಸಂದರ್ಭದಲ್ಲಿ ‘ಘಟನಾ ಸ್ಥಳಕ್ಕೆ ಕಳುಹಿಸಲು ತಮ್ಮಲ್ಲಿ ವಾಹನವಿಲ್ಲ’ ವೆಂದು ಠಾಣೆಯಿಂದ ಸಬೂಬು ನೀಡಲಾಗಿತ್ತು. ಹೈವೇ ಗಸ್ತು ವಾಹನವನ್ನೂ ಕಳುಹಿಸದೆ ಪೊಲೀಸರು ಕೈಚೆಲ್ಲಿದ್ದರು. ದಾರಿ ಕಾಣದೆ ದಂಪತಿ ತೀವ್ರವಾಗಿ ನೊಂದು ಕೊನೆಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ನೇರ ಕರೆ ಮಾಡಿದ್ದಾರೆ ಕೂಡಲೇ ಕಾರ್ಯಪ್ರವೃತ್ತರಾದ ಪೋಲೀಸ್ ಕಮಿಷನರ್ ಶಶಿಕುಮಾರ್ ಅವರು 
ಆರೋಪಿಯನ್ನು ಬಂಧಿಸಲು ಅದೇ ಸುರತ್ಕಲ್ ಠಾಣೆಯ ಇನ್ಸ್ಪೆಕ್ಟರ್ ಸಹಿತವಾಗಿ ಸಿಬ್ಬಂದಿಗಳನ್ನು 10 ನಿಮಿಷದಲ್ಲಿ ಕಳುಹಿಸಿದ್ದಾರೆ. ದುರ್ವರ್ತನೆ ತೋರಿದ್ದ ಟೋಲ್ ಸಿಬಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಇದೀಗ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು