10:57 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಅಂಕಲಿ ಮಠದ ಜಾತ್ರೋತ್ಸವ ರದ್ದು: ಮನೆಯಲ್ಲೇ ಸಂಭ್ರಮ ಆಚರಿಸಿಕೊಳ್ಳಲು ವೀರಭದ್ರ ಮಹಾಸ್ವಾಮೀಜಿ ಕರೆ

31/05/2021, 18:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸುಕ್ಷೇತ್ರ ಅಂಕಲಿ ಮಠದ ಜಾತ್ರೆ ಪ್ರತಿ ವರ್ಷದಂತೆ ಒಂದು ಮತ್ತು ಎರಡನೇ ತಾರೀಖಿನಂದು ಬಹಳ ವಿಜ್ರಂಭಣೆಯಿಂದ ನಡೆಯಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ 

ಈ ಬಾರಿ ಜಾತ್ರೆಯನ್ನು ರದ್ದು ಮಾಡಲಾಗಿದೆ. ಭಕ್ತಾದಿಗಳು ಮನೆಯಲ್ಲೇ ಆಚರಿಸುವಂತೆ ಮಹಾ ಸ್ವಾಮೀಜಿ ಮನವಿ ಮಾಡಿದ್ದಾರೆ.

ಕೋವಿಡ್ 19 ತಡೆಗಟ್ಟಲು ಸಾಮಾಜಿಕ ಅಂತರವನ್ನು ಕಾಪಾಡುವ ನಿಟ್ಟಿನಲ್ಲಿ ಮಹಾಸ್ವಾಮೀಜಿ ವೀರಭದ್ರ ಮಹಾ ಶಿವಾಚಾರ್ಯರು ಜಾತ್ರೆ ರದ್ದು ಮಾಡಲಾಗಿದೆ. ಭಕ್ತಾದಿಗಳು ಮನೆಯಲ್ಲಿ ದೇವರನ್ನು ನೆನೆದು ಪೂಜ್ಯರನ್ನು ಸ್ಮರಿಸಿ ಹಬ್ಬ ಆಚರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಕೊರೊನಾ ಕುರಿತು ಸರಕಾರದ ನಿಯಮಗಳನ್ನು ಪಾಲಿಸಬೇಕು, ಸಾಮಾಜಿಕ ಅಂತರ ಕಾಪಾಡುವುದರ ಜತೆ ಮುಖಕ್ಕೆ ಮಾಸ್ಕ್ ಧರಿಸಿ ನಿಮ್ಮ ಜೀವನವನ್ನು ರಕ್ಷಿಸಿಕೊಳ್ಳಿ ಎಂದು ಮಹಾಸ್ವಾಮೀಜಿ ಭಕ್ತ ಜನತೆಯಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.ಸುಕ್ಷೇತ್ರ ಅಂಕಲಿ ಮಠ ಕರ್ನಾಟಕದಲ್ಲಿ 

ಬಹಳಷ್ಟು ಪ್ರಖ್ಯಾತಿ ಹೊಂದಿರುವ ಕ್ಷೇತ್ರವಾಗಿದೆ. ಪೂಜ್ಯ ನಿರುಪಾದಿ ಮಹಾಸ್ವಾಮಿಗಳು, ಅಡವಿ ಸಿದ್ದರು ಮಹಾಸ್ವಾಮಿಗಳು ಮಠಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಪ್ರತಿವರ್ಷವೂ ಮಹಾರಾಷ್ಟ್ರ, ಆಂಧ್ರ ಹಾಗೂ ಹೊರ ದೇಶಗಳಿಂದ ಭಕ್ತರು ದೇವರ ಹಾಗೂ ಗುರುವಿನ ದರ್ಶನಕ್ಕೆ ಆಗಮಿಸುತ್ತಿದ್ದರು. ಆದರೆ ಈ ಬಾರಿ ಎಲ್ಲವೂ ಭಣಭ಼ಣ.

ಇತ್ತೀಚಿನ ಸುದ್ದಿ

ಜಾಹೀರಾತು