5:46 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ 18 ಮೀರಿದ ಎಲ್ಲ ಕಲಾವಿದರಿಗೆ ಸರಕಾರ ನೆರವು ನೀಡಲಿ: ನಟ, ರಂಗ ನಿರ್ದೇಶಕ ಡಿಂಗ್ರೀ ನರೇಶ್ 

31/05/2021, 18:13

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೋವಿಡ್ ಸಂಕಷ್ಟದಲ್ಲಿರುವ ಕಲಾವಿದರಿಗೆ ಸರಕಾರ ಆರ್ಥಿಕ ನೆರವು ನೀಡಲು ಮುಂದಾಗಿರುವುದು ಶ್ಲಾಘನೀಯ. ಆದರೆ ವಯಸ್ಸಿನ ಮಿತಿ ಹೇರುವುದು ಬೇಡ. 18 ಮೀರಿದ ಎಲ್ಲ ಕಲಾವಿದರಿಗೂ ನೆರವು ಒದಗಿಸಬೇಕೆಂದು   ನಟ, ನಿರ್ದೇಶಕ ಡಿಂಗ್ರೀ ನರೇಶ್ಮನವಿ ಮಾಡಿದ್ದಾರೆ.

ಕಲಾವಿದರು ಆರ್ಥಿಕ ನೆರವಿಗಾಗಿ ಅರ್ಜಿ ಹಾಕಲು ವಿಧಿಸಿರುವ ನಿಬಂಧನೆಗಳು ಅವೈಜ್ಞಾನಿಕವಾಗಿದ್ದು, ವಯಸ್ಸಿನ ಮಿತಿ 35 ವರ್ಷ ಮೀರಿರಬೇಕೆಂದು ನಿಯಮ ರೂಪಿಸಿರುವುದರಿಂದ ಈಗಾಗಲೇ ಸಂಕಷ್ಟದಲ್ಲಿರುವ ಯುವ ಕಲಾವಿದರಿಗೆ ಅನ್ಯಾಯವಾಗುತ್ತದೆ. ಯುವಕರನ್ನು ಸರಕಾರ ಕಡೆಗಣಿಸಿದಂತೆ ಬಿಂಬಿತವಾಗುತ್ತದೆ. 

ಸರಕಾರ ನೀಡಲು ನಿರ್ಧರಿಸಿರುವ ಆರ್ಥಿಕ ನೆರವಿನ ಮೊತ್ತ ಅತ್ಯಲ್ಪವಾಗಿದ್ದು, ಪ್ರಸ್ತುತ ಕಾಲಘಟ್ಟದಲ್ಲಿ ಜೀವನ ನಿರ್ವಹಿಸಲು ಕಲಾವಿದರಿಗೆ ಕಷ್ಟವಾಗುತ್ತದೆ. ಹಾಗಾಗಿ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ, ಆರ್ಥಿಕ ನೆರವಿನ ಮೊತ್ತವನ್ನು ಅಧಿಕ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅರ್ಜಿ ಹಾಕಲು ಸರ್ಕಾರ ನಿಗದಿಪಡಿಸಿರುವ ಕಡೆಯ ದಿನಾಂಕದ ಗಡುವು ಅಲ್ಪಾವಧಿಯಾಗಿದ್ದು, ಗ್ರಾಮೀಣ ಭಾಗದವರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಗಡುವನ್ನು ಕನಿಷ್ಠ ಒಂದು ವಾರಕ್ಕಾದರೂ ಮುಂದೂಡಬೇಕು. ಇದು ನಮ್ಮೆಲ್ಲರ ಒಕ್ಕೊರಲಿನ ಒತ್ತಾಯವಾಗಿದ್ದು ಕೂಡಲೇ ಈ ನಿಟ್ಟಿನಲ್ಲಿ ಸರ್ಕಾರ ಯೋಚಿಸಬೇಕೆಂದು ವಿನಂತಿಸಿಕೊಳ್ಳುತ್ತೇವೆ. ಇಲ್ಲವಾದಲ್ಲಿ ಯುವರಂಗ ಸಮುದಾಯ ಭವಿಷ್ಯದಲ್ಲಿ ಈ ನಿರ್ಧಾರದ ವಿರುದ್ಧ ರಾಜ್ಯವ್ಯಾಪಿ ಚಳುವಳಿ ನಡೆಸಬೇಕಾಗುತ್ತದೆಂಬ ಎಚ್ಚರಿಕೆಯನ್ನೂ ಸಹ ನೀಡಬೇಕಾಗುತ್ತದೆ ಎಂದರು.

ಈಗಾಗಲೇ ಯುವ ರಂಗಕರ್ಮಿಗಳು ಸೋಷಿಯಲ್ ಮೀಡಿಯಾ ಮೂಲಕ ಚಳುವಳಿ‌ ಪ್ರಾರಂಭ ಮಾಡಿದ್ದಾರೆ. ದಯ ಮಾಡಿ‌ ಈ ನಿಟ್ಟಿನಲ್ಲಿ ನೀವು ಸರಕಾರದ ಜತೆ ಮಾತಾಡಿ ಯುವಕರನ್ನು ಗಮನದಲ್ಲಿಟ್ಟುಕೊಂಡು ಅರ್ಥಿಕ ನೆರವು ನೀಡಿ ಎಂದು ರಂಗ ನಿರ್ದೇಶಕ, ಸಿನಿಮಾ ನಟ ಡಿಂಗ್ರಿ ನರೇಶ್ ಅವರು ಸಂಸದರಾದ ರಾಜ ಅಮರೇಶ್ವರ ನಾಯಕ್ ಅವರ ಗಮನಕ್ಕೂ ತಂದಿದ್ದಾರೆ. ಯುವ ಕಲಾವಿದರ ಪರವಾಗಿ ನಾನು ಒತ್ತಡ ತರುತ್ತೇನೆ ಎಂದು ಸಂಸದರು ಕೂಡ ಭರವಸೆ ನೀಡಿದ್ದಾರೆ ಎಂದು ಡಿಂಗ್ರೀ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು