3:18 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಸಂವಿಧಾನ ದೇಶದ ಅಡಿಪಾಯ, ಅದಕ್ಕೆ ತಾಯಿಯ ಸ್ಥಾನವಿದೆ: ಕೆನರಾ ಸಂಧ್ಯಾ ಕಾಲೇಜಿನ ಸಂವಿಧಾನ ದಿನಾಚರಣೆಯಲ್ಲಿ ಡಾ. ಅನಂತಕೃಷ್ಣ ಭಟ್

02/12/2021, 10:19

ಮಂಗಳೂರು(reporterkarnataka.com): ಸಂವಿಧಾನ ಒಂದು ದೇಶದ ಅಡಿಪಾಯವಿದ್ದಂತೆ. ಅದಕ್ಕೆ ತಾಯಿಯ ಸ್ಥಾನವಿದೆ. ಅತ್ಯಂತ ಸುದೀರ್ಘವಾದ ಕ್ರಮಬದ್ಧವಾದ ಸಂವಿಧಾನ ನಮ್ಮದು. ಸಂವಿಧಾನ ನಿಂತ ನೀರಲ್ಲ: ಹರಿಯುವ ನದಿಯಂತೆ ಅದರಲ್ಲಿ ಕಾಲಕಾಲಕ್ಕೆ ಬದಲಾವಣೆಗಳು ಆಗುತ್ತಾ ಹೋಗುತ್ತವೆ ಅಲ್ಲದೆ ಅದು ಜನತೆಯ ಆಶೋತ್ತರಗಳನ್ನು ಪ್ರತಿಫಲಿಸುವಂತಿರಬೇಕು ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ ಪಿ. ಅನಂತಕೃಷ್ಣ ಭಟ್ ಹೇಳಿದರು.

ಅವರು ಸಂವಿಧಾನ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ ಕೆನರಾ ಸಂಧ್ಯಾ ಕಾಲೇಜು ಹಮ್ಮಿಕೊಂಡಿದ್ದ “ಭಾರತೀಯ ಸಂವಿಧಾನ ರಚನೆ: ಸ್ಥಳೀಯ ಪ್ರಸ್ತುಕತೆಯ ಬಗ್ಗೆ ಅಜ್ಞಾತ ಸಂಗತಿಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.




ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ ಆದ್ಯಕ್ಷತೆ ವಹಿಸಿದ್ದರು. ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಖಜಾಂಜಿ ಹಾಗೂ ಕಾಲೇಜಿನ ಸಂಚಾಲಕ ಸಿ ಎ ವಾಮನ ಕಾಮತ್ , ಬದಲಿ ಖಜಾಂಚಿಗಳಾದ ಶ್ರೀ ಬಸ್ತಿ ಪುರುಷೋತ್ತಮ ಶೆಣೈ , ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ಉಪಸ್ಥಿತರಿದ್ದರು.

ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಅನಿಲ ಸ್ವಾಗತಿಸಿದರು, ಹಿಂದಿ ಪ್ರಾಧ್ಯಾಪಕಿ ಸುಜಾತ ಜಿ ನಾಯಕ್ ಅತಿಥಿಗಳನ್ನು ಪರಿಚಯಿಸದರು. ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಸೀಮಾ ಪ್ರಭು ಎಸ್ ವಂದಿಸಿದರು. ಕನ್ನಡ ಪ್ರಾಧ್ಯಪಿಕೆ ವಾಣಿ ಯು ಎಸ್ ನಿರೂಪಿಸಿದರು. ಉಷಾ ನಾಯಕ್ ಹಾಗೂ ಸುಜಾತಾ ಜಿ ನಾಯಕ್ ಪ್ರಾರ್ಥಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು