1:35 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಸಂವಿಧಾನ ದೇಶದ ಅಡಿಪಾಯ, ಅದಕ್ಕೆ ತಾಯಿಯ ಸ್ಥಾನವಿದೆ: ಕೆನರಾ ಸಂಧ್ಯಾ ಕಾಲೇಜಿನ ಸಂವಿಧಾನ ದಿನಾಚರಣೆಯಲ್ಲಿ ಡಾ. ಅನಂತಕೃಷ್ಣ ಭಟ್

02/12/2021, 10:19

ಮಂಗಳೂರು(reporterkarnataka.com): ಸಂವಿಧಾನ ಒಂದು ದೇಶದ ಅಡಿಪಾಯವಿದ್ದಂತೆ. ಅದಕ್ಕೆ ತಾಯಿಯ ಸ್ಥಾನವಿದೆ. ಅತ್ಯಂತ ಸುದೀರ್ಘವಾದ ಕ್ರಮಬದ್ಧವಾದ ಸಂವಿಧಾನ ನಮ್ಮದು. ಸಂವಿಧಾನ ನಿಂತ ನೀರಲ್ಲ: ಹರಿಯುವ ನದಿಯಂತೆ ಅದರಲ್ಲಿ ಕಾಲಕಾಲಕ್ಕೆ ಬದಲಾವಣೆಗಳು ಆಗುತ್ತಾ ಹೋಗುತ್ತವೆ ಅಲ್ಲದೆ ಅದು ಜನತೆಯ ಆಶೋತ್ತರಗಳನ್ನು ಪ್ರತಿಫಲಿಸುವಂತಿರಬೇಕು ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ ಪಿ. ಅನಂತಕೃಷ್ಣ ಭಟ್ ಹೇಳಿದರು.

ಅವರು ಸಂವಿಧಾನ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ ಕೆನರಾ ಸಂಧ್ಯಾ ಕಾಲೇಜು ಹಮ್ಮಿಕೊಂಡಿದ್ದ “ಭಾರತೀಯ ಸಂವಿಧಾನ ರಚನೆ: ಸ್ಥಳೀಯ ಪ್ರಸ್ತುಕತೆಯ ಬಗ್ಗೆ ಅಜ್ಞಾತ ಸಂಗತಿಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.




ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ ಆದ್ಯಕ್ಷತೆ ವಹಿಸಿದ್ದರು. ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಖಜಾಂಜಿ ಹಾಗೂ ಕಾಲೇಜಿನ ಸಂಚಾಲಕ ಸಿ ಎ ವಾಮನ ಕಾಮತ್ , ಬದಲಿ ಖಜಾಂಚಿಗಳಾದ ಶ್ರೀ ಬಸ್ತಿ ಪುರುಷೋತ್ತಮ ಶೆಣೈ , ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ಉಪಸ್ಥಿತರಿದ್ದರು.

ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಅನಿಲ ಸ್ವಾಗತಿಸಿದರು, ಹಿಂದಿ ಪ್ರಾಧ್ಯಾಪಕಿ ಸುಜಾತ ಜಿ ನಾಯಕ್ ಅತಿಥಿಗಳನ್ನು ಪರಿಚಯಿಸದರು. ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಸೀಮಾ ಪ್ರಭು ಎಸ್ ವಂದಿಸಿದರು. ಕನ್ನಡ ಪ್ರಾಧ್ಯಪಿಕೆ ವಾಣಿ ಯು ಎಸ್ ನಿರೂಪಿಸಿದರು. ಉಷಾ ನಾಯಕ್ ಹಾಗೂ ಸುಜಾತಾ ಜಿ ನಾಯಕ್ ಪ್ರಾರ್ಥಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು