8:54 AM Wednesday16 - April 2025
ಬ್ರೇಕಿಂಗ್ ನ್ಯೂಸ್
ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:…

ಇತ್ತೀಚಿನ ಸುದ್ದಿ

ಸಂವಿಧಾನ ದೇಶದ ಅಡಿಪಾಯ, ಅದಕ್ಕೆ ತಾಯಿಯ ಸ್ಥಾನವಿದೆ: ಕೆನರಾ ಸಂಧ್ಯಾ ಕಾಲೇಜಿನ ಸಂವಿಧಾನ ದಿನಾಚರಣೆಯಲ್ಲಿ ಡಾ. ಅನಂತಕೃಷ್ಣ ಭಟ್

02/12/2021, 10:19

ಮಂಗಳೂರು(reporterkarnataka.com): ಸಂವಿಧಾನ ಒಂದು ದೇಶದ ಅಡಿಪಾಯವಿದ್ದಂತೆ. ಅದಕ್ಕೆ ತಾಯಿಯ ಸ್ಥಾನವಿದೆ. ಅತ್ಯಂತ ಸುದೀರ್ಘವಾದ ಕ್ರಮಬದ್ಧವಾದ ಸಂವಿಧಾನ ನಮ್ಮದು. ಸಂವಿಧಾನ ನಿಂತ ನೀರಲ್ಲ: ಹರಿಯುವ ನದಿಯಂತೆ ಅದರಲ್ಲಿ ಕಾಲಕಾಲಕ್ಕೆ ಬದಲಾವಣೆಗಳು ಆಗುತ್ತಾ ಹೋಗುತ್ತವೆ ಅಲ್ಲದೆ ಅದು ಜನತೆಯ ಆಶೋತ್ತರಗಳನ್ನು ಪ್ರತಿಫಲಿಸುವಂತಿರಬೇಕು ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ ಪಿ. ಅನಂತಕೃಷ್ಣ ಭಟ್ ಹೇಳಿದರು.

ಅವರು ಸಂವಿಧಾನ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ ಕೆನರಾ ಸಂಧ್ಯಾ ಕಾಲೇಜು ಹಮ್ಮಿಕೊಂಡಿದ್ದ “ಭಾರತೀಯ ಸಂವಿಧಾನ ರಚನೆ: ಸ್ಥಳೀಯ ಪ್ರಸ್ತುಕತೆಯ ಬಗ್ಗೆ ಅಜ್ಞಾತ ಸಂಗತಿಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.




ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ ಆದ್ಯಕ್ಷತೆ ವಹಿಸಿದ್ದರು. ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಖಜಾಂಜಿ ಹಾಗೂ ಕಾಲೇಜಿನ ಸಂಚಾಲಕ ಸಿ ಎ ವಾಮನ ಕಾಮತ್ , ಬದಲಿ ಖಜಾಂಚಿಗಳಾದ ಶ್ರೀ ಬಸ್ತಿ ಪುರುಷೋತ್ತಮ ಶೆಣೈ , ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ಉಪಸ್ಥಿತರಿದ್ದರು.

ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಅನಿಲ ಸ್ವಾಗತಿಸಿದರು, ಹಿಂದಿ ಪ್ರಾಧ್ಯಾಪಕಿ ಸುಜಾತ ಜಿ ನಾಯಕ್ ಅತಿಥಿಗಳನ್ನು ಪರಿಚಯಿಸದರು. ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಸೀಮಾ ಪ್ರಭು ಎಸ್ ವಂದಿಸಿದರು. ಕನ್ನಡ ಪ್ರಾಧ್ಯಪಿಕೆ ವಾಣಿ ಯು ಎಸ್ ನಿರೂಪಿಸಿದರು. ಉಷಾ ನಾಯಕ್ ಹಾಗೂ ಸುಜಾತಾ ಜಿ ನಾಯಕ್ ಪ್ರಾರ್ಥಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು