12:36 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಹಿರಿಯೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವಂತೆ ತಾಲ್ಲೂಕು ರೈತ ಸಂಘದಿಂದ ಸಚಿವರಿಗೆ ಮನವಿ

02/12/2021, 09:50

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹಿರಿಯೂರು ಪ್ರತಿ ಅಂಗನವಾಡಿ ವ್ಯಾಪ್ತಿಯಲ್ಲಿ 30 ಕ್ಕೂ ಹೆಚ್ಚು ಮಕ್ಕಳು ಹಾಗೂ ಗರ್ಭಿಣಿ ಸ್ತ್ರೀಯರು ಇದ್ದು, ಇವರ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ಕೊಟ್ಟು ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂಬುದಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಒತ್ತಾಯಿಸಿದರು.

ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆವರಣದಲ್ಲಿ ಹಿರಿಯೂರು ತಾಲ್ಲೂಕು ರೈತ ಸಂಘದ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಅಧಿಕಾರಿಗಳ ಮುಖಾಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ  ಶಶಿಕಲಾ ಜೊಲ್ಲೆ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. 

ಗ್ರಾಮೀಣ ಭಾಗದ ಶಾಲೆಗಳಲ್ಲಿ ಕೇವಲ 10ರಿಂದ 12 ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದು, ಅವರಿಗೆ ಸರ್ಕಾರಿ ನೌಕರಿಯಲ್ಲಿ 30ರಿಂದ 40 ಸಾವಿರ ವೇತನ ಕೊಡುತ್ತಿದ್ದಾರೆ. ಆದರೆ ಅಂಗನವಾಡಿಯಲ್ಲಿ 25 ರಿಂದ 30 ಕ್ಕೂ ಹೆಚ್ಚು ಮಕ್ಕಳು ಗರ್ಭಿಣಿಯರಿಗೂ ಮತ್ತು ಗ್ರಾಮದ ಎಲ್ಲಾ ಆರೋಗ್ಯ ಮಾರ್ಗದರ್ಶಕರಾಗಿರುವ ಇವರುಗಳಿಗೆ ಕನಿಷ್ಠ ವೇತನ ಕೊಡುತ್ತಿದ್ದು, ಇನ್ನು ಮುಂದೆ ಇವರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಹೆಚ್ಚು ವೇತನ ಕೊಡಿಸಬೇಕು ಎಂಬುದಾಗಿ ಅವರು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ತಾಲ್ಲೂಕು ರೈತಸಂಘದ ಮುಖಂಡರುಗಳಾದ ಕೆ.ಎನ್.ತಿಮ್ಮಣ್ಣ, ವೈ.ಶಿವಣ್ಣ, ಹೆಚ್.ವಿ.ವೀರಣ್ಣಗೌಡ, ರಂಗನಾಥ್, ಎ.ವಿರುಪಾಕ್ಷಪ್ಪ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು