7:34 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ…

ಇತ್ತೀಚಿನ ಸುದ್ದಿ

ಹಿರಿಯೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವಂತೆ ತಾಲ್ಲೂಕು ರೈತ ಸಂಘದಿಂದ ಸಚಿವರಿಗೆ ಮನವಿ

02/12/2021, 09:50

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹಿರಿಯೂರು ಪ್ರತಿ ಅಂಗನವಾಡಿ ವ್ಯಾಪ್ತಿಯಲ್ಲಿ 30 ಕ್ಕೂ ಹೆಚ್ಚು ಮಕ್ಕಳು ಹಾಗೂ ಗರ್ಭಿಣಿ ಸ್ತ್ರೀಯರು ಇದ್ದು, ಇವರ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ಕೊಟ್ಟು ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂಬುದಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಒತ್ತಾಯಿಸಿದರು.

ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆವರಣದಲ್ಲಿ ಹಿರಿಯೂರು ತಾಲ್ಲೂಕು ರೈತ ಸಂಘದ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಅಧಿಕಾರಿಗಳ ಮುಖಾಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ  ಶಶಿಕಲಾ ಜೊಲ್ಲೆ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. 

ಗ್ರಾಮೀಣ ಭಾಗದ ಶಾಲೆಗಳಲ್ಲಿ ಕೇವಲ 10ರಿಂದ 12 ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದು, ಅವರಿಗೆ ಸರ್ಕಾರಿ ನೌಕರಿಯಲ್ಲಿ 30ರಿಂದ 40 ಸಾವಿರ ವೇತನ ಕೊಡುತ್ತಿದ್ದಾರೆ. ಆದರೆ ಅಂಗನವಾಡಿಯಲ್ಲಿ 25 ರಿಂದ 30 ಕ್ಕೂ ಹೆಚ್ಚು ಮಕ್ಕಳು ಗರ್ಭಿಣಿಯರಿಗೂ ಮತ್ತು ಗ್ರಾಮದ ಎಲ್ಲಾ ಆರೋಗ್ಯ ಮಾರ್ಗದರ್ಶಕರಾಗಿರುವ ಇವರುಗಳಿಗೆ ಕನಿಷ್ಠ ವೇತನ ಕೊಡುತ್ತಿದ್ದು, ಇನ್ನು ಮುಂದೆ ಇವರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಹೆಚ್ಚು ವೇತನ ಕೊಡಿಸಬೇಕು ಎಂಬುದಾಗಿ ಅವರು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ತಾಲ್ಲೂಕು ರೈತಸಂಘದ ಮುಖಂಡರುಗಳಾದ ಕೆ.ಎನ್.ತಿಮ್ಮಣ್ಣ, ವೈ.ಶಿವಣ್ಣ, ಹೆಚ್.ವಿ.ವೀರಣ್ಣಗೌಡ, ರಂಗನಾಥ್, ಎ.ವಿರುಪಾಕ್ಷಪ್ಪ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು