12:37 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ರಾಜ್ಯಪಾಲ ಗೆಹಲೋಟ್ ಭೇಟಿ: ಧರ್ಮಸ್ಥಳಕ್ಕೆ ಪಯಣ; ನಾಳೆ ಉಡುಪಿ ಕೃಷ್ಣ ಮಠಕ್ಕೆ

02/12/2021, 11:38

ಮಂಗಳೂರು(reporterkarnataka.com):

ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಇಂದು ಕಡಲನಗರಿ ಮಂಗಳೂರಿಗೆ ಭೇಟಿ ನೀಡಿದರು.
ಮಂಗಳೂರು  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.


ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಸಹಾಯಕ ಆಯುಕ್ತ ಮದನ್ ಮೋಹನ್ ಸೇರಿದಂತೆ ಜಿಲ್ಲಾಡಳಿತ ಹಿರಿಯ ಅಧಿಕಾರಿಗಳು ರಾಜ್ಯಪಾಲರನ್ನು ಬರ ಮಾಡಿಕೊಂಡರು.

ನಂತರ ರಾಜ್ಯಪಾಲರು ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದರು.

ಡಿಸೆಂಬರ್ 2 ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರವಾಸ ಕೈಗೊಂಡಿದ್ದಾರೆ. ನಾಳೆ ಅವರು ಉಡುಪಿಗೆ ಭೇಟಿ ನೀಡುವರು.

ಇತ್ತೀಚಿನ ಸುದ್ದಿ

ಜಾಹೀರಾತು