4:58 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಕನ್ನಡದಲ್ಲಿ ಇಂಜಿನಿಯರಿಂಗ್ ಕೋರ್ಸ್ ಆರಂಭಿಸಲು ಅನುಮತಿ: ಎಐಸಿಟಿಇ ಕ್ರಮಕ್ಕೆ ಎಬಿವಿಪಿ ಸ್ವಾಗತ

31/05/2021, 19:45

ಮಂಗಳೂರು(reporterkarnataka news): ವಿಜ್ಞಾನ ಮತ್ತು ತಂತ್ರಜ್ಞಾನ ಇಂದಿನ ಯುಗದಲ್ಲಿ ಮಹತ್ವವಾದ ಸ್ಥಾನ ಪಡೆದಿದೆ. ದೇಶದ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡಲು ಎಲ್ಲರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಇಂಜಿನಿಯರಿಂಗ್ ಕೋರ್ಸ್ ಗಳನ್ನು 2020-22ನೇ ಶೈಕ್ಷಣಿಕ ಸಾಲಿನಿಂದ ಪ್ರಾರಂಭಿಸಲು ಅನುಮತಿ ನೀಡಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸ್ವಾಗತಿಸುತ್ತದೆ.

  ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದು ಅನುಕೂಲಕರವಾಗಿದೆ. ಇಲ್ಲಿಯವರೆಗೆ ಕೇವಲ ನಗರ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಆದರೆ ಇನ್ನು ಮುಂದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂಜಿನಿಯರಿಂಗ್ ವ್ಯಾಸಂಗ ಮಾಡಲು ಇದು ಪ್ರೋತ್ಸಾಹಕರವಾಗಲಿದೆ. ಕನ್ನಡ ಭಾಷೆಯಲ್ಲಿ ವ್ಯಾಸಂಗ ಮಾಡುವ ವಿಷಯ ಕೇವಲ ಅನುಮತಿ ಹಂತದಲ್ಲಿ ನಿಲ್ಲದೆ ಇದನ್ನು ಸರಿಯಾದ ರೀತಿಯಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಸರ್ಕಾರ ವಿಶೇಷವಾಗಿ ವಿಟಿಯು ಪಠ್ಯಪುಸ್ತಕಗಳ ಮತ್ತು ಇತರೆ ಪಠ್ಯಕ್ಕೆ ಸಹಾಯವಾಗುವ ಅನುವಾದಗಳನ್ನು ಶೀಘ್ರ ಗತಿಯಲ್ಲಿ ಮಾಡಬೇಕಿದೆ ಮತ್ತು ಸರಿಯಾದ ತಯಾರಿಯ ಜೊತೆಯಲ್ಲಿ ಪಠ್ಯಪುಸ್ತಕಗಳ (ಅನುವಾದಿತ) ಯಾವುದೇ ಕೊರತೆಯಾಗದಂತೆ ನಿಗಾವಹಿಸಬೇಕೆಂದು ಮತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಜ್ಞರ ಸಮಿತಿ ರಚಿಸಿ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗಕ್ಕೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಲು ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಸಲಹೆ ನೀಡುತ್ತದೆ ಎಂದು ರಾಜ್ಯ ಕಾರ್ಯದರ್ಶಿ ಪ್ರತೀಕ್ ಮಾಳಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು