9:58 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ 

02/12/2021, 21:51

ಮೈಸೂರು(reporterkarnataka.com:

ಪೋಷಕರು ಮದುವೆ ಮಾಡಿಸದ ಬೇಸರದಿಂದ ಯುವ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಪ್ರೇಮಿಗಳಾದ ಬಿ.ಜಿ.ಸತೀಶ್ (21) ಬಿ.ಜಿ.ವರಲಕ್ಷ್ಮಿ (20) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. 

ಸತೀಶ್ ಹಾಗೂ ವರಲಕ್ಷ್ಮೀ 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ಸರ್ಕಾರಿ ಕೆಲಸದ ನಂತರ ಮದುವೆ ಮಾಡುವುದಾಗಿ ಹುಡುಗಿ ಮನೆಯವರು ಹೇಳಿದ್ದರು. ಬಿಎ ಓದಿದ್ದ ಯುವಕ ಪೊಲೀಸ್ ಕೆಲಸಕ್ಕೆ ಸೇರುವ ಯತ್ನ ಮಾಡುತ್ತಿದ್ದನು. ಯುವತಿ ನರ್ಸಿಂಗ್ ಓದುತ್ತಿದ್ದಳು.

ಕೆಲಸ ಸಿಕ್ಕ ನಂತರ ಮದುವೆ ಮಾಡುವುದಾಗಿ ಹುಡುಗಿ ತಂದೆ ಸಿದ್ದಲಿಂಗ ನಾಯ್ಕ ತಾಕೀತು ಮಾಡಿದ್ದರು. ಪೋಷಕರ ನಡೆಗೆ ಬೇಸೆತ್ತು ಮೈಸೂರಿಗೆ ಆಗಮಿಸಿದ್ದ ಪ್ರೇಮಿಗಳು ಮಂಗಳವಾರ ನಗರದಲ್ಲಿರುವ ಸಂಜೆ ಲಾಡ್ಜ್ವೊಂದರಲ್ಲಿ ರೂಂ ತೆಗೆದುಕೊಂಡಿದ್ದರು. ರಾತ್ರಿಯೂ ಹೊರ ಬಂದಿರಲಿಲ್ಲ. ಬೆಳಿಗ್ಗೆಯೂ ಹೊರ ಬಾರದ ಹಿನ್ನಲೆ, ರೂಮ್ ಬಳಿ ತೆರಳಿ ನೋಡಿದಾಗ ಇಬ್ಬರೂ ಸೀಲಿಂಗ್ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಕುರಿತು ಲಾಡ್ಜ್ ಮಾಲೀಕ ಲಷ್ಕರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಲಷ್ಕರ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು