3:04 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ 

02/12/2021, 21:51

ಮೈಸೂರು(reporterkarnataka.com:

ಪೋಷಕರು ಮದುವೆ ಮಾಡಿಸದ ಬೇಸರದಿಂದ ಯುವ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಪ್ರೇಮಿಗಳಾದ ಬಿ.ಜಿ.ಸತೀಶ್ (21) ಬಿ.ಜಿ.ವರಲಕ್ಷ್ಮಿ (20) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. 

ಸತೀಶ್ ಹಾಗೂ ವರಲಕ್ಷ್ಮೀ 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ಸರ್ಕಾರಿ ಕೆಲಸದ ನಂತರ ಮದುವೆ ಮಾಡುವುದಾಗಿ ಹುಡುಗಿ ಮನೆಯವರು ಹೇಳಿದ್ದರು. ಬಿಎ ಓದಿದ್ದ ಯುವಕ ಪೊಲೀಸ್ ಕೆಲಸಕ್ಕೆ ಸೇರುವ ಯತ್ನ ಮಾಡುತ್ತಿದ್ದನು. ಯುವತಿ ನರ್ಸಿಂಗ್ ಓದುತ್ತಿದ್ದಳು.

ಕೆಲಸ ಸಿಕ್ಕ ನಂತರ ಮದುವೆ ಮಾಡುವುದಾಗಿ ಹುಡುಗಿ ತಂದೆ ಸಿದ್ದಲಿಂಗ ನಾಯ್ಕ ತಾಕೀತು ಮಾಡಿದ್ದರು. ಪೋಷಕರ ನಡೆಗೆ ಬೇಸೆತ್ತು ಮೈಸೂರಿಗೆ ಆಗಮಿಸಿದ್ದ ಪ್ರೇಮಿಗಳು ಮಂಗಳವಾರ ನಗರದಲ್ಲಿರುವ ಸಂಜೆ ಲಾಡ್ಜ್ವೊಂದರಲ್ಲಿ ರೂಂ ತೆಗೆದುಕೊಂಡಿದ್ದರು. ರಾತ್ರಿಯೂ ಹೊರ ಬಂದಿರಲಿಲ್ಲ. ಬೆಳಿಗ್ಗೆಯೂ ಹೊರ ಬಾರದ ಹಿನ್ನಲೆ, ರೂಮ್ ಬಳಿ ತೆರಳಿ ನೋಡಿದಾಗ ಇಬ್ಬರೂ ಸೀಲಿಂಗ್ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಕುರಿತು ಲಾಡ್ಜ್ ಮಾಲೀಕ ಲಷ್ಕರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಲಷ್ಕರ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು