2:40 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ 

02/12/2021, 21:51

ಮೈಸೂರು(reporterkarnataka.com:

ಪೋಷಕರು ಮದುವೆ ಮಾಡಿಸದ ಬೇಸರದಿಂದ ಯುವ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಪ್ರೇಮಿಗಳಾದ ಬಿ.ಜಿ.ಸತೀಶ್ (21) ಬಿ.ಜಿ.ವರಲಕ್ಷ್ಮಿ (20) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. 

ಸತೀಶ್ ಹಾಗೂ ವರಲಕ್ಷ್ಮೀ 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ಸರ್ಕಾರಿ ಕೆಲಸದ ನಂತರ ಮದುವೆ ಮಾಡುವುದಾಗಿ ಹುಡುಗಿ ಮನೆಯವರು ಹೇಳಿದ್ದರು. ಬಿಎ ಓದಿದ್ದ ಯುವಕ ಪೊಲೀಸ್ ಕೆಲಸಕ್ಕೆ ಸೇರುವ ಯತ್ನ ಮಾಡುತ್ತಿದ್ದನು. ಯುವತಿ ನರ್ಸಿಂಗ್ ಓದುತ್ತಿದ್ದಳು.

ಕೆಲಸ ಸಿಕ್ಕ ನಂತರ ಮದುವೆ ಮಾಡುವುದಾಗಿ ಹುಡುಗಿ ತಂದೆ ಸಿದ್ದಲಿಂಗ ನಾಯ್ಕ ತಾಕೀತು ಮಾಡಿದ್ದರು. ಪೋಷಕರ ನಡೆಗೆ ಬೇಸೆತ್ತು ಮೈಸೂರಿಗೆ ಆಗಮಿಸಿದ್ದ ಪ್ರೇಮಿಗಳು ಮಂಗಳವಾರ ನಗರದಲ್ಲಿರುವ ಸಂಜೆ ಲಾಡ್ಜ್ವೊಂದರಲ್ಲಿ ರೂಂ ತೆಗೆದುಕೊಂಡಿದ್ದರು. ರಾತ್ರಿಯೂ ಹೊರ ಬಂದಿರಲಿಲ್ಲ. ಬೆಳಿಗ್ಗೆಯೂ ಹೊರ ಬಾರದ ಹಿನ್ನಲೆ, ರೂಮ್ ಬಳಿ ತೆರಳಿ ನೋಡಿದಾಗ ಇಬ್ಬರೂ ಸೀಲಿಂಗ್ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಕುರಿತು ಲಾಡ್ಜ್ ಮಾಲೀಕ ಲಷ್ಕರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಲಷ್ಕರ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು