6:07 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಕರ್ನಾಟಕ ಸ್ಟೈಲ್ ಐಕಾನ್ 2021 ಸ್ಪರ್ಧೆ: ವಿಜಯಪುರದ ದೀಕ್ಷಾ ಸೆಕೆಂಡ್ ರನ್ನರ್ ಅಪ್ 

03/12/2021, 14:08

ವಿಜಯಪುರ(reporterkarnataka.com): ಫ್ಯಾಶನ್ ಪ್ಯಾರಿಸ್ ನಲ್ಲಿ ಹುಟ್ಟಿದ್ರೆ ವಿಜಯಪುರದಲ್ಲಿ ಕೊನೆಗೊಳ್ಳುತ್ತದೆ ಎಂಬ ಕುಹಕದ ಮಾತಿತ್ತು. ಆದರೆ ಈ ಮಾತನ್ನು ಬುಡಮೇಲು ಮಾಡಲಾಗಿದೆ. ವಿಜಯಪುರದ ದೀಕ್ಷಾ ಭೀಸೆ ಅವರು ಕರ್ನಾಟಕ ಸ್ಟೈಲ್ ಐಕಾನ್ 2021ರ ಸೆಕೆಂಡ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.


ಮುಂಬೈನ ಬೋರೆಗಾಂವನಲ್ಲಿ ನಡೆದ ಮಿಸ್ ಕರ್ನಾಟಕ ಸ್ಟೈಲ್ ಐಕಾನ್ 2021ರಲ್ಲಿ ವಿಜಯಪುರದ ದೀಕ್ಷಾ ಭೀಸೆರವರು ಪಾಲ್ಗೊಂಡಿದ್ದರು. ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಇದೀಗ ಅವರು ಪ್ರಶಸ್ತಿ ಬಾಚಿಕೊಂಡು ವಿಜಯಪುರ ಮಾತ್ರವಲ್ಲದೆ ಇಡೀ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ.

ಸುಮಾರು ಒಂದು ವಾರಗಳ ತರಬೇತಿಯ ನಂತರ ಆತ್ಮವಿಶ್ವಾಸದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ ದೀಕ್ಷಾ ಭೀಸೆರವರು ನಡೆ-ನುಡಿ-ಭಾವ ಶುದ್ಧತೆಯಲ್ಲಿ ಎಲ್ಲರ ಮನಗೆದ್ದರು. ದಕ್ಷಿಣ ಕರ್ನಾಟಕ ಮತ್ತು
ಮುಂಬೈ ವಲಸಿಗ ಕನ್ನಡಿಗರೇ ತುಂಬಿದ್ದ.ಈ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆಲ್ಲುವುದು ಕನಸಿನ ಮಾತು. ಆದರೆ ದೀಕ್ಷಾ.ಭೀಸೆರವರು ಸಾಧನೆ ಮಾಡಿ ಇದೀಗ ನಾಡಿನ ಗಮನ ಸೆಳೆದಿದ್ದಾರೆ. ಉತ್ತರ ಕರ್ನಾಟಕದ ಯುವತಿಯರಿಗೆ ಸ್ಫೂರ್ತಿಯಾಗಿದ್ದಾರೆ.

ಪ್ರಶಸ್ತಿ ಪಡೆದ ಬಳಿಕ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ದೀಕ್ಷಾ ಅವರು “ನಮ್ಮ ಭಾಗದ ಹೆಣ್ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸೋದು ತುಂಬಾ ವಿರಳ. ಹೆಣ್ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು