10:05 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಜವಾದ್ ಚಂಡಮಾರುತ: ಒಡಿಶಾ, ಆಂಧ್ರ, ಪಶ್ಚಿಮ ಬಂಗಾಳ ತೀರಕ್ಕೆ ಅಪ್ಪಳಿಸುವ ನಿರೀಕ್ಷೆ; ಎಚ್ಚರಿಕೆ ಕ್ರಮ

03/12/2021, 14:56

ಹೊಸದಿಲ್ಲಿ(reporterkarnataka.com): ಅಕಾಲಿಕ ಮಳೆಯಿಂದಾಗಿ ದೇಶವೇ ತತ್ತರಿಸಿರುವ ನಡುವೆ ಮತ್ತೊಂದು ಚಂಡಮಾರುತ ಜವಾದ್ ಭಾರತಕ್ಕೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಜವಾದ್ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಇಂದು ಈ ಚಂಡಮಾರುತ ಉತ್ತರ ಆಂಧ್ರಪ್ರದೇಶ ಮತ್ತು ದಕ್ಷಿಣ ಒಡಿಶಾ ಕರಾವಳಿ ತಲುಪುವ ಸಾಧ್ಯತೆ ಇದೆ.

ಇಂದು ಬೆಳಗ್ಗೆ ಪಶ್ಚಿಮ-ಮಧ್ಯ ಭಾಗದ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರವಾಗಿದ್ದು, ಆಳವಾದ ವಾಯುಭಾರ ಕುಸಿತವಾಗಿದೆ. ಈ ಹಿನ್ನೆಲೆ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ನಾಳೆ ಈ ಚಂಡಮಾರುತ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಥೈಲ್ಯಾಂಡ್‌ನ ಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿ ಗಾಳಿ ಏಳಲಿದ್ದು, ಅದು ಚಂಡಮಾರುತದ ಸ್ವರೂಪ ಪಡೆಯಲಿದೆ. ನಂತರ ಅಂಡಮಾನ್ ಸಾಗರದ ದಕ್ಷಿಣ ಕರಾವಳಿ ಮೂಲಕ ಡಿ.4ರಂದು ಭಾರತ ಪ್ರವೇಶಿಸಲಿದ್ದು, ಇದರಿಂದ ಅತೀ ಹೆಚ್ಚು ಮಳೆಯಾಗಲಿದೆ. ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಭೂಕುಸಿತದ ಸಾಧ್ಯತೆ  ಇದೆ. ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಮತ್ತು ಬೆಳೆಗಳಿಗೆ, ಮುಖ್ಯವಾಗಿ ಭತ್ತದ ಬೆಳೆಗೆ ನಷ್ಟವಾಗುವ ಭೀತಿ ಇದೆ.

ಜವಾದ್ ಚಂಡಮಾರುತದಿಂದ ಉಂಟಾಗಲಿರುವ ಪರಿಸ್ಥಿತಿ ಎದುರಿಸಲು ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳು ಹಾಗೂ ಸಂಬಂಧಿಸಿದ ಸಂಸ್ಥೆಗಳು ಕೈಗೊಂಡಿರುವ ಸಿದ್ಧತೆ ಕುರಿತು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು