7:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಗುಜ್ಜರಕೆರೆ: ಯೆನಪೊಯ ಹಾಸ್ಟೆಲ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಬಿಡಿಸಲು ಬಂದ ಪೊಲೀಸರ ಮೇಲೂ ಹಲ್ಲೆ; 12 ಮಂದಿಗೆ ಗಾಯ

03/12/2021, 16:10

ಮಂಗಳೂರು(reporterkarnataka.com):

ನಗರದ ಮಂಗಳಾದೇವಿ ಬಳಿಯ ಐತಿಹಾಸಿಕ ಗುಜ್ಜರಕೆರೆ ಸಮೀಪದಲ್ಲಿರುವ ಯೆನಪೊಯ ಶಿಕ್ಷಣ ಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಗಲಾಟೆ ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆ ನಡೆಸಲಾಗಿದೆ. ಈ ಸಂಬಂಧ 9 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ 7 ಮಂದಿ ವಿದ್ಯಾರ್ಥಿಗಳು ಹಾಗೂ  5 ಮಂದಿ ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗುರುವಾರ ರಾತ್ರಿ 7 ಗಂಟೆಯ ವೇಳೆಗೆ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಕಿತ್ತಾಟ ಆರಂಭವಾಗಿದ್ದು, 10ರ ಸುಮಾರಿಗೆ ಇದು ತಾರಕಕ್ಕೇರಿತ್ತು. ವಿದ್ಯಾರ್ಥಿಗಳ ಗಲಾಟೆ, ಗದ್ದಲ, ಬೊಬ್ಬೆ ಪರಿಸರದ ಶಾಂತಿ ಕದಡಿದ್ದು, ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು.

ರಾತ್ರಿ ಸುಮಾರು 10 ಗಂಟೆ ಬಳಿಕ ಪಿಎಸ್‌ಐ ಹಾಗೂ

ಸಿಬ್ಬಂದಿಗಳು ಹಾಸ್ಟೆಲ್ ಗೆ ಹೋದಾಗ ಹಾಸ್ಟೆಲ್ ನ ಕೆಲವು ವಿದ್ಯಾರ್ಥಿಗಳು ಇಂಟರ್ ಲಾಕ್, ಕಲ್ಲು ಹಾಗೂ ಕುರ್ಚಿಗಳನ್ನು ಎಸೆದು ಹಲ್ಲೆ ನಡೆಸಿದ್ದಾರೆ. ಫಹಾದ್, ಅಬು ತಹರ್, ಮೊಹಮ್ಮದ್ ನಾಸಿಪ್, ಆದರ್ಶ ದಸ್ತಗಿರಿಯಾದ ಆರೋಪಿಗಳು ಎಂದು ಎನ್ನಲಾಗಿದೆ.

ಗುರುವಾರ ಸಂಜೆ 7 ಗಂಟೆಯ ವೇಳೆಗೆ ಮೂರನೇ ವರ್ಷದ ಬಿಎಸ್ ಸಿ ಹಾಸ್ಪಿಟಾಲಿಟಿ ಸೈನ್ ಕಲಿಯುತ್ತಿರುವ ಕೇರಳ ಮೂಲದ ಆದರ್ಶ ಪ್ರೇಮಕುಮಾರ್ ತನ್ನ ಸ್ನೇಹಿತ ಅಭಿರಾಮಿಯನ್ನು ಭೇಟಿ ಮಾಡಿ ಮಾತನಾಡಿಸುವಾಗ ಸಿನಾನ್ ಹಾಗೂ ಇತರ 8 ಜನ ಇಂಟರ್ ಲಾಕ್ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದರು. ಆದರ್ಶ್ ಪ್ರೇಮಕುಮಾರ್ ಎಡಕೈ ಪ್ರಾಕ್ಟರ್‌ ಆಗಿದ್ದು, ಮೊಹಮ್ಮದ್ ನಸಿಪ್ ಗೆ ಗಾಯವಾಗಿದೆ. ಗಲಾಟೆ ಬಿಡಿಸಲು ಬಂದಿದ್ದ ಸ್ನೇಹಿತರಿಗೆ ಶನಿನ್ ಮತ್ತು ಶ್ರವಣ್ ರಿಗೆ ಆರೋಪಿಗಳು ಜೀವ ಬೆದರಿಕೆ ಒಡ್ಡಿರುವುದಾಗಿ ಆದರ್ಶ ದೂರು ನೀಡಿದ್ದಾನೆ. 7 ಗಂಟೆಗೆ ಆರಂಭವಾದ ವಿದ್ಯಾರ್ಥಿಗಳ ನಡುವಿನ ಘರ್ಷಣೆ ಮತ್ತೆ ತಾರಕಕ್ಕೇರಿತು.

ಹಾಸ್ಟೆಲ್ ನಲ್ಲಿ ಬಹುತೇಕ ಕಾಸರಗೋಡು ಜಿಲ್ಲೆ ಹೊರತುಪಡಿಸಿ ಕೇರಳದ ಇತರ ಜಿಲ್ಲೆಗಳ ವಿದ್ಯಾರ್ಥಿಗಳು ವಾಸ್ತವ್ಯ ಹೊಂದಿದ್ದಾರೆ. 

ಸುಮಾರು 10 ದಿನಗಳ ಹಿಂದೆ ಇದೇ ಹಾಸ್ಟೆಲ್ ನ ವಿದ್ಯಾರ್ಥಿಗಳು ಸ್ಥಳೀಯರ ಜತೆ ಗಲಾಟೆ ನಡೆಸಿದ್ದರು. ಹಾಸ್ಟೆಲ್ ನ ಕೆಲವು ವಿದ್ಯಾರ್ಥಿಗಳು ಸ್ಥಳೀಯ ಹುಡುಗಿಯರಿಗೆ ಚುಡಾಯಿಸುವುದು, ಕಿರುಕುಳ ನೀಡುವುದು ಮುಂತಾದ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಗುಜ್ಜರಕೆರೆ ಬಳಿ ಬಂದು ಸಿಗರೇಟ್ ಸೇದಿ ಅದರ ಅವಶೇಷಗಳನ್ನು ಕೆರೆಗೆ ಎಸೆಯುತ್ತಾರೆ ಎಂದು ಸ್ಥಳೀಯರು ದೂರಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.

ಶಾಸಕ ಡಿ. ವೇದವ್ಯಾಸ ಕಾಮತ್ ಹಾಗೂ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು