10:52 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ

04/12/2021, 09:55

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬೀದಿ ನಾಯಿಯ ದಾಳಿಗೆ ತುತ್ತಾಗಿ ಯುವಕನೊರ್ವ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಚಳ್ಳಕೆರೆ ತಾಲೂಕಿನ ಸೋಮಗುದ್ದು ಗ್ರಾಪಂ ವ್ಯಾಪ್ತಿಯ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಹೈರಾಣಾಗಿದ್ದಾರೆ. 

ಸುಮಾರು 15 ದಿನಗಳ ಹಿಂದೆ ಮೃತ್ತುರಾಜ್ ಎಂಬ 30ರ ವರ್ಷದ ಯುವಕನಿಗೆ ಬಿದಿ ನಾಯಿ ಕಚ್ಚಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಗುಣ ಮುಖರಾಗದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ  ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಅಲ್ಲೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗಿನ ಜಾವ ಯುವಕ ಮುತ್ತುರಾಜು ಇಹಲೋಕ ತ್ಯಜಿಸಿದ್ದಾನೆ. ಸುದ್ದಿ ತಿಳಿದ ಕುಟುಂಬಸ್ಥರು  ರೋಧನ ಮುಗಿಲು ಮುಟ್ಟುವಂತಿದ್ದು, ಕೂಡಲೆ ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗಂಜಿಗುಂಟೆ ಲಂಬಾಣಿ ಲಾಂಡದಲ್ಲಿ ಒಂದೇ ಸಮುದಾಯದವರಿದ್ದು, ಸುಮಾರು 200ಕ್ಕೂ ಹೆಚ್ಚು ಮನೆಗದ್ದು ಅಕ್ರಮವಾಗಿ ಸುಮಾರು 10

ಅಂಗಡಿಗಳಲ್ಲಿ ಚಿಕನ್ ಮಾಂಸ ಮಾರಾಟ, ಚಿಕನ್ ಕಬಾಬ್ ದಿನಕ್ಕೆ ಕ್ವಿಂಟಲ್ ಗಂಟಲೆ ಮಾರಾಟವಾಗುತ್ತಿದ್ದು, ಚಿಕನ್ ತ್ಯಾಜ್ಯಕ್ಕಾಗಿ ನಾಯಿಗಳು ರಸ್ತೆಯಲ್ಲೇ ಮಲಗುತ್ತಿವೆ. ವೃದ್ದರು, ಮಕ್ಕಳು, ಸೇರಿದಂತೆ ಸಾರ್ವಜನಿಕರು ಪ್ಲಾಸ್ಟಿಕ್ ಕವರುಗಳನ್ನು ಕೈಯಲ್ಲಿಡಿದಕೊಂಡು ಹೋದರೆ ಸಾಕು ಮೇಲೆರಿಗುತ್ತವೆ. ಈ ಬಗ್ಗೆ ಸಾಕಾಷ್ಟು ಬಾರಿ ಗ್ರಾಪಂ ಅಧಿಕಾರಿಗಳ ಗಮನಸೆಳೆದರೂ ಪ್ರಯೋಜವಾಗಿಲ್ಲ. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಅಕ್ರಮ ಕೋಳಿ ಮಾಂಸ ಅಂಗಡಿ ಹಾಗೂ ಬೀದಿ ನಾಯಿಗಳಿಗೆ ಕಡಿವಾಣ ಹಾಕುವರೇ ಕಾದು ನೋಡ ಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು