5:20 PM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ

04/12/2021, 09:55

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬೀದಿ ನಾಯಿಯ ದಾಳಿಗೆ ತುತ್ತಾಗಿ ಯುವಕನೊರ್ವ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ.

ಚಳ್ಳಕೆರೆ ತಾಲೂಕಿನ ಸೋಮಗುದ್ದು ಗ್ರಾಪಂ ವ್ಯಾಪ್ತಿಯ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಹೈರಾಣಾಗಿದ್ದಾರೆ. 

ಸುಮಾರು 15 ದಿನಗಳ ಹಿಂದೆ ಮೃತ್ತುರಾಜ್ ಎಂಬ 30ರ ವರ್ಷದ ಯುವಕನಿಗೆ ಬಿದಿ ನಾಯಿ ಕಚ್ಚಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಗುಣ ಮುಖರಾಗದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ  ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಅಲ್ಲೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗಿನ ಜಾವ ಯುವಕ ಮುತ್ತುರಾಜು ಇಹಲೋಕ ತ್ಯಜಿಸಿದ್ದಾನೆ. ಸುದ್ದಿ ತಿಳಿದ ಕುಟುಂಬಸ್ಥರು  ರೋಧನ ಮುಗಿಲು ಮುಟ್ಟುವಂತಿದ್ದು, ಕೂಡಲೆ ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗಂಜಿಗುಂಟೆ ಲಂಬಾಣಿ ಲಾಂಡದಲ್ಲಿ ಒಂದೇ ಸಮುದಾಯದವರಿದ್ದು, ಸುಮಾರು 200ಕ್ಕೂ ಹೆಚ್ಚು ಮನೆಗದ್ದು ಅಕ್ರಮವಾಗಿ ಸುಮಾರು 10

ಅಂಗಡಿಗಳಲ್ಲಿ ಚಿಕನ್ ಮಾಂಸ ಮಾರಾಟ, ಚಿಕನ್ ಕಬಾಬ್ ದಿನಕ್ಕೆ ಕ್ವಿಂಟಲ್ ಗಂಟಲೆ ಮಾರಾಟವಾಗುತ್ತಿದ್ದು, ಚಿಕನ್ ತ್ಯಾಜ್ಯಕ್ಕಾಗಿ ನಾಯಿಗಳು ರಸ್ತೆಯಲ್ಲೇ ಮಲಗುತ್ತಿವೆ. ವೃದ್ದರು, ಮಕ್ಕಳು, ಸೇರಿದಂತೆ ಸಾರ್ವಜನಿಕರು ಪ್ಲಾಸ್ಟಿಕ್ ಕವರುಗಳನ್ನು ಕೈಯಲ್ಲಿಡಿದಕೊಂಡು ಹೋದರೆ ಸಾಕು ಮೇಲೆರಿಗುತ್ತವೆ. ಈ ಬಗ್ಗೆ ಸಾಕಾಷ್ಟು ಬಾರಿ ಗ್ರಾಪಂ ಅಧಿಕಾರಿಗಳ ಗಮನಸೆಳೆದರೂ ಪ್ರಯೋಜವಾಗಿಲ್ಲ. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಅಕ್ರಮ ಕೋಳಿ ಮಾಂಸ ಅಂಗಡಿ ಹಾಗೂ ಬೀದಿ ನಾಯಿಗಳಿಗೆ ಕಡಿವಾಣ ಹಾಕುವರೇ ಕಾದು ನೋಡ ಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು